ಚಿಕ್ಕಮಗಳೂರು: ಅನುಮಾನಾಸ್ಪದವಾಗಿ ಗೃಹಿಣಿಯೊಬ್ಬರು ಮನೆಯಲ್ಲಿ ಸಾವನಪ್ಪಿದ್ದು, ಮೃತ ಗೃಹಿಣಿ ಪೋಷಕರು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ಶ್ವೇತಾ (31) ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕುಟುಂಬಸ್ಥರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದರು.
ಈ ವೇಳೆ ಮೃತ ಶ್ವೇತಾ ಅವರ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ, ಅಂತ್ಯಕ್ರಿಯೆಯನ್ನು ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದರು.
ಶ್ವೇತಾ ಅವರ ಪತಿ ದರ್ಶನ್ ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಶಂಕೆಯನ್ನು ಶ್ವೇತಾ ಕುಟುಂಬದವರು ವ್ಯಕ್ತಪಡಿಸಿದ್ದಾರೆ. ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ಮೂರು ವರ್ಷಗಳ ಹಿಂದೆ ಶ್ವೇತಾ ಹಾಗೂ ದರ್ಶನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನಲ್ಲಿ ನೆಲೆಸಿದ್ದರು. ಶ್ವೇತಾ ಹಾಗೂ ದರ್ಶನ್ ನಾಲ್ಕು ದಿನಗಳ ಹಿಂದೆ ಬೆಂಗಳೂರಿನಿಂದ ದೇವವೃಂದಕ್ಕೆ ಬಂದಿದ್ದರು. ಹಾರ್ಟ್ ಅಟ್ಯಾಕ್ ನಿಂದ ಶ್ವೇತಾ ಮೃತಪಟ್ಟಿದ್ದಾಳೆಂದು ಪತಿ ದರ್ಶನ್ ಆಕೆಯ ಕುಟುಂಬಕ್ಕೆ ತಿಳಿಸಿದ್ದರು.
ದರ್ಶನ್ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾದ ಹಿನ್ನಲೆ ಇಂಜಕ್ಷನ್ ನೀಡಿ ಕೊಲೆ ಮಾಡಿರಬಹು ದೆಂದು ಶ್ವೇತಾ ಕುಟುಂಬದವರು ಆರೋಪಿಸಿ ತಾರತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದವರನ್ನು ತಡೆದು ಶವ ಪರೀಕ್ಷೆಗೆ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.