ಬೆಂಗಳೂರು: ಲೋಕ ಅದಾಲತ್ ಮೂಲಕ ಒಂದೇ ದಿನ 25 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಮಾಹಿತಿ ನೀಡಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ.ಪಿ.ಎಸ್.ದಿನೇಶ್ ಕುಮಾರ್, ಡಿಸೆಂಬರ್ 9 ರಂದು ಲೋಕ ಅದಾಲತ್ ಮೂಲಕ 25.14 ಲಕ್ಷ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದರು.
ಇತ್ಯರ್ಥಗೊಳಿಸಲಾಗಿರುವ ಒಟ್ಟು ಪ್ರಕರಣಗಳಲ್ಲಿ ಕೋರ್ಟ್ ಗಳಲ್ಲಿ ಬಾಕಿ ಇದ್ದ 2.24 ಲಕ್ಷ ಪ್ರಕರಣಗಳು ಸೇರಿವೆ. ಉಳಿದಂತೆ, 22.90 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿವೆ. ಒಟ್ಟು 1,569 ಕೋಟಿ ರೂಪಾಯಿ ಪರಿಹಾರ ಮೊತ್ತದೊಂದಿಗೆ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದರು.
ಅಲ್ಲದೆ, ಇತ್ಯರ್ಥಗೊಳಿಸಿದ ಪ್ರಕರಣಗಳಲ್ಲಿ 1,358 ವೈವಾಹಿಕ ಪ್ರಕರಣಗಳು ಇತ್ಯರ್ಥಗೊಂಡಿವೆ. ಸಂಧಾನದ ಮೂಲಕ 262 ದಂಪತಿಗಳನ್ನ ಒಟ್ಟುಗೂಡಿಸಲಾಗಿದೆ. 3,125 ವಿಭಾಗ ದಾವೆ ರಾಜಿಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ ಎಂದು ದಿನೇಶ್ ಕುಮಾರ್ ತಿಳಿಸಿದರು.
4031 ಅಪಘಾತ ಪ್ರಕರಣಗಳಲ್ಲಿ 209 ಕೋಟಿ ಪರಿಹಾರ ನೀಡಲಾಗಿದೆ. 10513 ಚೆಕ್ ಬೌನ್ಸ್ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ. 28 ರೇರಾ, 88 ಗ್ರಾಹಕರ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ನ್ಯಾ.ದಿನೇಶ್ ಕುಮಾರ್ ಹೇಳಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.