ಬೆಳಗಾವಿ: ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿನ ಬಸ್ ಹಾಗೂ ಸಿಬ್ಬಂದಿಗಳ ಕೊರತೆಯನ್ನು ಸಚಿವ ರಾಮಲಿಂಗಾ ರೆಡ್ಡಿಯವರು ಒಪ್ಪಿಕೊಂಡಿದ್ದು, ಸಮಸ್ಯೆ ಬಗೆಹರಿಸಲು ಶೀಘ್ರದಲ್ಲೇ 5,500 ಹೊಸ ಬಸ್ ಖರೀದಿ, 9,000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಬುಧವಾರ ಹೇಳಿದರು.
ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಸಚಿವರು, 2024ರ ಫೆಬ್ರವರಿ ಅಂತ್ಯದ ವೇಳೆಗೆ ಹೊಸ ಬಸ್ಗಳ ಸೇರ್ಪಡೆ, ಸಿಬ್ಬಂದಿ ನೇಮಕಾತಿ ಕಾರ್ಯ ಅಂತಿಮಗೊಳ್ಳಲಿದ್ದು, ಬಸ್ಗಳ ಕೊರತೆ ಬಹುತೇಕ ಕಡಿಮೆಯಾಗಲಿದೆ. ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಗೆ ತಕ್ಕಂತೆ ಸೌಕರ್ಯಗಳನ್ನು ಹೆಚ್ಚಿಸಲಾಗುತ್ತದೆ ಎಂದು ಹೇಳಿದರು.
ಶಕ್ತಿ ಯೋಜನೆ ಜಾರಿಯಾದ ನಂತರ ರಾಜ್ಯದಲ್ಲಿ 80 ಲಕ್ಷ ಇದ್ದ ಪ್ರಯಾಣಿಕರ ಸಂಖ್ಯೆ 1 ಕೋಟಿಗೆ ತಲುಪಿದೆ. ಆದರೆ, ಅದಕ್ಕೆ ತಕ್ಕಂತೆ ಬಸ್ ಗಳು ಇಲ್ಲ. ಹಿಂದೆ ನಾನೇ ಸಾರಿಗೆ ಸಚಿವ ಆಗಿದ್ದಾಗ ರಾಜ್ಯದ ನಾಲ್ಕೂ ನಿಗಮಗಳಿಂದ 24 ಸಾವಿರ ಬಸ್ ಇತ್ತು. ಆದರೆ, ಈಗ ಅದು 23 ಸಾವಿರಕ್ಕೆ ಇಳಿದಿದೆ. ಹೊಸದಾಗಿ ಬಸ್ ಖರೀದಿಯೇ ಮಾಡಿಲ್ಲ. ನೇಮಕಾತಿ ವಿಚಾರದಲ್ಲಿಯೂ ಪ್ರಗತಿ ಆಗಿಲ್ಲ. 13,888 ಜನ ನಿವೃತ್ತಿಯಾಗಿದ್ದರೂ ನೇಮಕಾತಿ ಆಗಿಲ್ಲ. ಈಗ ನಾವು 9 ಸಾವಿರ ಸಿಬ್ಬಂದಿ ನೇಮಕ ಮಾಡುತ್ತಿದ್ದೇವೆ ಎಂದು ತಿಳಿಸಿದರು,
5500 ಹೊಸ ಬಸ್ ಸೇರ್ಪಡೆ ಮಾಡುತ್ತಿದ್ದೇವೆ. ಫೆಬ್ರವರಿ ಕೊನೆಗೆ ಹೊಸ ಬಸ್ ಹಾಗೂ ಸಿಬ್ಬಂದಿ ಎರಡೂ ಬರಲಿವೆ. ಕೋವಿಡ್ ವೇಳೆ 3800 ಬಸ್ ರದ್ದು ಮಾಡಿದ್ದೆವು. ಈಗ ಅದೆನ್ನೆಲ್ಲ ಫೆಬ್ರವರಿ ಕೊನೆಗೆ ಮರಳಿ ಆರಂಭಿಸಲಾಗುತ್ತದೆ. ಕ್ಯಾನ್ಸಲ್ ಆಗಿದ್ದ ಶೆಡ್ಯೂಲ್ ಮರಳಿ ಆರಂಭಿಸುತ್ತೇವೆ. ಬಸ್ ನಿಲ್ದಾಣಗಳಲ್ಲಿ ಸೌಕರ್ಯಗಳನ್ನು ಮಾಡಲಾಗುತ್ತದೆ. ಬಹುತೇಕ ಬಸ್ ನಿಲ್ದಾಣಗಳು ಅಪ್ ಡೇಟ್ ಆಗಿವೆ. ಶೌಚಾಲಯ ಸರಿಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.