ಬೆಳಗಾವಿ: ವಿಧಾನಸಭೆಗೆ ಸಾರ್ವಜನಿಕರಿಗೆ ಪಾಸ್ ಕೊಡುವಾಗ ಅವರ ನೈಜತೆ ನೋಡಿಕೊಂಡು ಕೊಡಲು ಸೂಚಿಸಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು.
ಸುವರ್ಣಸೌಧದಲ್ಲಿ ಸಂಸತ್ತಿನ ಭದ್ರತಾ ಲೋಪದ ಕುರಿತು ಮಾತನಾಡಿ, ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ಸೌಧದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ. ಸಂಸತ್ತಿನ ಗ್ಯಾಸ್ ಬಾಂಬ್ ನಮಗೆ ಎಚ್ಚರಿಕೆ ಘಂಟೆಯಾಗಿದೆ. ಯಾವಾಗ ಏನಾಗಬಹುದು ಅಂತ ಊಹೆ ಮಾಡಕ್ಕಾಗಲ್ಲ. ಜನಸಾಮಾನ್ಯರು ಸಹಕಾರ ಕೊಡಬೇಕು’ ಎಂದು ಮನವಿ ಮಾಡಿದರು.
”ಜನರಿಗೆ ಪಾಸ್ ಕೊಡುವಾಗ ಅವರ ನೈಜತೆ ನೋಡಿಕೊಂಡು ಪಾಸ್ ಕೊಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳಿಗೆ, ಸತ್ಪ್ರಜೆಗಳಿಗೆ ತೊಂದರೆ ಆಗದಂತೆ ಪಾಸ್ ವಿತರಿಸಲು ಸೂಚಿಸಲಾಗಿದೆ. ಹೆಚ್ಚು ತಪಾಸಣೆ ಮಾಡಿ ಮೂಲಕ ಸುವರ್ಣಸೌಧಕ್ಕೆ ಪ್ರವೇಶ ನೀಡಲಾಗುತ್ತದೆ. ಜನ ಸಾಮಾನ್ಯರು ಸಹಕರಿಸಬೇಕು” ಎಂದು ಮನವಿ ಮಾಡಿದರು.
ಇನ್ನು ಇದೇ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಸಂಸತ್ತಿನ ದಾಳಿ ಯಾರೇ ಮಾಡಿದರೂ ಖಂಡನೀಯ. ಈ ಘಟನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಆದ್ರೆ, ಈ ಲೋಪಕ್ಕೆ ಜವಾಬ್ದಾರಿ ಯಾರು ಎಂದು ಪ್ರಶ್ನಿಸಿದರು.
ಇದೇ ಪಾಸ್ ನಮ್ಮವರು ಕೊಟ್ಟಿದ್ದಿದ್ರೆ ಪರಿಸ್ಥಿತಿ ಏನಾಗಿರ್ತಿತ್ತು? ಪಾಸ್ ಕೊಟ್ಟ ಮೈಸೂರು ಸಂಸದರನ್ನು ಯಾಕೆ ಇನ್ನೂ ವಿಚಾರಣೆ ಮಾಡಿಲ್ಲ? ಮಹುವಾ ಮೊಯಿತ್ರಾ ವಿಚಾರದಲ್ಲಿ ಈ ಸರ್ಕಾರ ಹೇಗೆ ನಡೆದುಕೊಳ್ತು? ಎಲ್ಲಿ ಹೋದ್ರು ನಿಮ್ಮ ಜೇಮ್ಸ್ ಬಾಂಡ್ ಅಜಿತ್ ದೋವಲ್? ಎಲ್ಲಿ ಹೋದ್ರು ಅಮಿತ್ ಶಾ? ಪ್ರತಾಪ್ ಸಿಂಹ ಇದರ ಬಗ್ಗೆ ಸ್ಪಷ್ಟನೆ ಕೊಡಲಿ ಎಂದು ಅವರು ಒತ್ತಾಯಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.