ಮನೆ ರಾಜ್ಯ ಹಣ ದುರ್ಬಳಕೆ: ಬಿಡದಿ ಪೊಲೀಸ್ ಠಾಣೆ ನಿರೀಕ್ಷಕ ಅಮಾನತು

ಹಣ ದುರ್ಬಳಕೆ: ಬಿಡದಿ ಪೊಲೀಸ್ ಠಾಣೆ ನಿರೀಕ್ಷಕ ಅಮಾನತು

0

ರಾಮನಗರ: ಹಣ ದುರ್ಬಳಕೆ ಆರೋಪ ಎದುರಿಸುತ್ತಿರುವ ಬಿಡದಿ ಪೊಲೀಸ್ ಠಾಣೆ ನಿರೀಕ್ಷಕ ಶಂಕರ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ.

ಶಂಕರ್ ನಾಯಕ್ ಅಮಾನತ್ತುಗೊಳಿಸಿ ಕೇಂದ್ರ ವಲಯದ ಐಜಿಪಿ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

2022ರಲ್ಲಿ ಬೆಂಗಳೂರಿನ ಬ್ಯಾಟರಾಯನಪುರ ಠಾಣೆಯಲ್ಲಿ ಕೆಲಸ‌ ಮಾಡುತ್ತಿದ್ದ ಶಂಕರ್ ನಾಯಕ್ ಕಳ್ಳತನ ಆರೋಪಿಯಿಂದ ವಶಪಡಿಸಿಕೊಂಡ 72 ಲಕ್ಷ ರೂ.‌ಹಣವನ್ನು ಸರ್ಕಾರಿ ಖಜಾನೆಗೆ ಜಮೆ ಮಾಡದೆ ದುರ್ಬಳಕೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಇವರ ವಿರುದ್ದ ಎಫ್ ಐಆರ್ ದಾಖಲಾಗಿತ್ತು.