ಮೈಸೂರು: ಮೈಸೂರಿನ ನಗರ ಪ್ರದೇಶಗಳಲ್ಲಿನ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಹಾಗೂ ಅರ್ಹರಿಗೆ ಯೋಜನೆಗಳನ್ನು ತಲುಪಿಸುವ ವಿಕಾಸ ಸಂಕಲ್ಪ ಯಾತ್ರೆಗೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ.
ಮೈಸೂರು ನಗರಕೆ ಆಗಮಿಸಿರುವ ವಿಕಸಿತ ಸಂಕಲ್ಪ ಭಾರತದ ಯಾತ್ರೆಗೆ ರೈಲ್ವೆ ನಿಲ್ದಾಣದ ಮುಂಭಾಗ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವ್ಯವಸ್ಥಾಪಕರಾದ (DRM) ಶಿಲ್ಪಿ ಅಗರ್ವಾಲ್ ರವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಕೇಂದ್ರ ಸರ್ಕಾರದ ಯೋಜನೆಗಳನ್ನು ನಗರ ಪ್ರದೇಶದ ಕಟ್ಟಡ ವ್ಯಕ್ತಿಗೂ ತಲುಪಿಸುವ ನಿಟ್ಟಿನಲ್ಲಿ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ವಿಕಾಸ ಸಂಕಲ್ಪ ಯಾತ್ರೆ ಮುಖಾಂತರ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಇದರಿಂದ ನಗರ ಪ್ರದೇಶದಲ್ಲಿರುವ ಲಕ್ಷಾಂತರ ಜನರು ಕೇಂದ್ರ ಸರ್ಕಾರದ ಯೋಜನೆಗಳ ಪಡೆಯಲು ಸಹಕಾರಿಯಾಗಲಿದೆ. ಅರ್ಹರು ಈ ಯೋಜನೆಗಳನ್ನು ಪಡೆಯಲು ಮುಂದಾಗಬೇಕು ಎಂದು ತಿಳಿಸಿದರು.
ಪ್ರಧಾನ ಮಂತ್ರಿಗಳು ನೀಡುವ ಸಾಲದ ಯೋಜನೆಯಲ್ಲಿ ಸಾಲ ಪಡೆದು ಹೊಸ ಆಟೋ ಖರೀದಿಸಿ ಆರ್ಥಿಕತೆ ಹೆಚ್ಚಿಸಿಕೊಂಡಿದ್ದೇನೆ. ಮೊದಲು ಬಾಡಿಗೆ ಆಟೋ ಮುಖಾಂತರ ಹಣ ಉಳಿತಾಯವಾಗುತ್ತಿರಲಿಲ್ಲ. ಇದೀಗ ಸ್ವಂತ ಆಟೋದಲ್ಲಿ ಹೆಚ್ಚಿನ ದುಡಿಮೆ ಮಾಡಿ ಜೀವನಕ್ಕೆ ಸಹಕಾರಿಯಾಗಿದೆ. ಎಂದು ಫಲಾನುಭವಿ ಸಲೀಂ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಪಿಎಂಐಜಿಪಿ ಯೋಜನೆ ಅಡಿಯಲ್ಲಿ ನೀಡುವ ಸಾಲದಲ್ಲಿ 10 ಲಕ್ಷ ರೂಗಳ ಸಾಲ ಪಡೆದು ಮರದ ಕೆಲಸ ವೃದ್ಧಿಸಿಕೊಂಡಿದ್ದೇನೆ. ಈ ಸಾಲದ ಮುಖಾಂತರ 10 ಜನರಿಗೆ ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆ ನೀಗಿಸಲು ಮುಂದಾಗಿದ್ದೇನೆ. ಎಂದು ಫಲಾನುಭವಿ ನವೀನ್ ಕುಮಾರ್ ತಿಳಿಸಿದ್ದಾರೆ.
ಗ್ರಾಮಾಂತರ ಪ್ರದೇಶದ ಜನರಿಗೆ ವಿಕಸಿತ ಸಂಕಲ್ಪ ಯಾತ್ರೆ ಮುಖಾಂತರ ಯೋಜನೆಯ ಕಾರ್ಯ ಮಾಡುವುದರ ಜೊತೆಗೆ ನಗರ ಪ್ರದೇಶದ ಕೊಳಗೇರಿ ಹಾಗೂ ಹೆಚ್ಚಾಗಿ ಬಡತನ ರೇಖೆಗಿಂತ ಕೆಳಗಿರುವ ಬಡಾವಣೆಗಳಿಗೆ ವಿಕಸಿತ ಯಾತ್ರೆಯು ಸಂಚರಿಸಿ ಕೇಂದ್ರದ ಯೋಜನೆಗಳ ಮಾಹಿತಿ ನೀಡಿ ಅರ್ಹರಿಗೆ ಸ್ಥಳದಲ್ಲೇ ಬ್ಯಾಂಕ್ ಖಾತೆ ಆರಂಭದ ಜೊತೆಗೆ ಸಾಲ ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ ಹಾಗೂ ಪೂರ್ಣಪ್ರಮಾಣದ ದಾಖಲೆ ಒದಗಿಸುತ್ತಿದ್ದಂತೆ ಸ್ಥಳದಲ್ಲೇ ಉಜ್ವಲ ಯೋಜನೆಯ ಗ್ಯಾಸ್ ಸಿಲೆಂಡರ್ ಹಾಗೂ ಸ್ಟವ್ ಅನ್ನು ಉಚಿತವಾಗಿ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ಎಸ್ ಬಿ ಐ ಬ್ಯಾಂಕ್ ನ ಪ್ರಾದೇಶಿಕ ವ್ಯವಸ್ಥಾಪಕರಾದ ಜಯಂತಿ ತಿಳಿಸಿದ್ದಾರೆ. ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಮೈಸೂರು ನಗರದ ಎಲ್ಲಾ ಪ್ರದೇಶಗಳಿಗೂ ಸಂಚರಿಸಿ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ನೀಡಲಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.