ಮೈಸೂರು: ಸಂಸತ್ ಭವನಕ್ಕೆ ನುಗ್ಗಿ ದಾಂಧಲೆ ನಡೆಸಿದ್ದ ಮೈಸೂರಿನ ಮನೋರಂಜನ್ ಮನೆಗೆ ದಿಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಲ್ಲದೆ, ಮನೋರಂಜನ್ ಕುಟುಂಬದವರನ್ನು ವಿಚಾರಣೆ ನಡೆಸಿದರು.
ಇಂಟೆಲಿಜೆನ್ಸ್ ಬ್ಯೂರೋ ವಿಭಾಗದ ಇಬ್ಬರು, ಇಬ್ಬರು ದಿಲ್ಲಿ ಪೊಲೀಸರು ಹಾಗೂ ಮಹಿಳಾ ಸಿಬಂದಿಯನ್ನೊಳಗೊಂಡ ತನಿಖಾ ತಂಡ ಸೋಮವಾರ ಬೆಳಗ್ಗೆ 11ಕ್ಕೆ ವಿಜಯನಗರ 2ನೇ ಹಂತದಲ್ಲಿರುವ ಮನೋರಂಜನ್ ಮನೆಗೆ ತೆರಳಿ, ಆತನ ಕೊಠಡಿಯನ್ನು ತಪಾಸಣೆ ಮಾಡಿತು.
ದಿಲ್ಲಿಯ ಸ್ಪೆಷಲ್ ಸೆಲ್ ಪೊಲೀಸರು ವಿಚಾರಣೆ ನಡೆಸಿದ್ದು, ಇವರಿಗೆ ನಗರದಲ್ಲೇ ಉಳಿದುಕೊಂಡಿದ್ದ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಕೈಜೋಡಿಸಿದರು.
ಮೊದಲೇ ಪ್ರಶ್ನೆಗಳನ್ನು ಸಿದ್ಧಪಡಿಸಿಕೊಂಡು ಬಂದಿದ್ದ ತಂಡ, ಬೆಳಗ್ಗೆ 11ರಿಂದ ಸಂಜೆ 6.30ರ ವರೆಗೆ ಮನೆಯವರನ್ನು ವಿಚಾರಣೆ ನಡೆಸಿದೆ ಎಂದು ತಿಳಿದು ಬಂದಿದೆ.
ತನಿಖಾ ತಂಡಕ್ಕೆ ಭಾಷೆಯ ತೊಡಕು ಹಿನ್ನೆಲೆಯಲ್ಲಿ ಸ್ಥಳೀಯ ಭಾಷಾಂತರಕಾರರ ಸಹಾಯ ಪಡೆದು ವಿಚಾರಣೆ ನಡೆಸಲಾಗಿದೆ.
ಮನೋರಂಜನ್ ತಂದೆ ದೇವರಾಜೇ ಗೌಡ ಅವರು ತೋಟದ ಮನೆಗೆ ತೆರಳಿದ್ದರಿಂದ ತಾಯಿ ಶೈಲಜಾ ಅವರನ್ನು ತನಿಖಾ ತಂಡ ವಿಚಾರಣೆಗೆ ಒಳಪಡಿಸಿತು. ಅನಂತರ ಮನೋರಂಜನ್ ಕೊಠಡಿಯನ್ನು ತೆರೆದು ಅಲ್ಲಿದ್ದ ಪುಸ್ತಕ ಮತ್ತು ಆತನಿಗೆ ಸೇರಿದ ಎಲ್ಲ ದಾಖಲೆಗಳನ್ನು ಅಧಿಕಾರಿಗಳು ಕೊಂಡೊಯ್ದರು. ವಿಜಯನಗರ ಪೊಲೀಸರು ಮನೆಯ ಬಳಿ ಭದ್ರತೆ ಒದಗಿಸಿದ್ದರು. ಮನೋರಂಜನ್ ಬ್ಯಾಂಕ್ ಖಾತೆ, ಆತನ ಫೋನ್ ಗೆ ಬಂದ ಕರೆಗಳ ವಿವರ ಹಾಗೂ ಮತ್ತೊಬ್ಬ ಆರೋಪಿ ಸಾಗರ್ ಶರ್ಮ ಮೈಸೂರಿನಲ್ಲಿ ಎಲ್ಲೆಲ್ಲಿ ಓಡಾಡಿದ್ದ ಎಂಬ ಮಾಹಿತಿಯನ್ನೂ ತಂಡ ಕಲೆ ಹಾಕುತ್ತಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.