ಬೆಂಗಳೂರು: ಸಾರ್ವಜನಿಕರು ತಮ್ಮ ಬಳಿ ಇರಿಸಿಕೊಂಡಿರುವ ಹುಲಿ ಉಗುರು, ಆನೆ ದಂತ ಸೇರಿದಂತೆ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಮೂರು ತಿಂಗಳ ಕಾಲಾವಕಾಶ ನೀಡುವ ಪ್ರಸ್ತಾವವಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಜನರು ಅರಿವಿದ್ದೋ, ಇಲ್ಲದೆಯೋ ತಮ್ಮ ಬಳಿ ಇರಿಸಿಕೊಂಡಿರುವ ವನ್ಯಜೀವಿಗಳ ಅಂಗಾಂಗಗಳನ್ನು ಸರ್ಕಾರದ ವಶಕ್ಕೆ ಪಡೆದು ನಾಶಪಡಿಸಲಾಗುವುದು. ಇದಕ್ಕಾಗಿ ಮೂರು ತಿಂಗಳ ಅವಧಿ ನೀಡಲಾಗುವುದು. ಸಂಪುಟ ಸಭೆಯಲ್ಲಿ ಈ ಕುರಿತು ಪ್ರಸ್ತಾವ ಮಂಡಿಸಿ, ಅನುಮೋದನೆ ಪಡೆಯಲಾಗುವುದು’ ಎಂದರು.
ಈಗಾಗಲೇ ಅರಣ್ಯ ಇಲಾಖೆಯ ಸ್ವಾಧೀನದಲ್ಲಿರುವ ವನ್ಯಜೀವಿ ಅಂಗಾಂಗಗಳನ್ನೂ ನಾಶಪಡಿಸಲಾಗುವುದು. ಮೈಸೂರಿನ ಅರಣ್ಯ ಇಲಾಖೆ ಸಂಗ್ರಹಾಗಾರದಲ್ಲಿ ದಾಸ್ತಾನು ಮಾಡಲಾಗಿರುವ ವನ್ಯಜೀವಿಗಳ ಅಂಗಾಂಗಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ನಾಶಪಡಿಸಲು ಯೋಚಿಸಲಾಗಿದೆ ಎಂದು ತಿಳಿಸಿದರು.
ಲಿಂಗನಮಕ್ಕಿ ಅಣೆಕಟ್ಟೆ ನಿರ್ಮಾಣಕ್ಕೆ ಜಮೀನು ಕಳೆದುಕೊಂಡು ಸಂತ್ರಸ್ತರಾದ ಕುಟುಂಬಗಳಿಗೆ ನೀಡಲಾಗಿರುವ ಅರಣ್ಯ ಜಮೀನಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸಂತ್ರಸ್ತರ ಪರ ನಿಲುವು ತಾಳಿದೆ. ಸಂತ್ರಸ್ತರ ಪರವಾದ ನಿಲುವಿನೊಂದಿಗೆ ಅರಣ್ಯ ಇಲಾಖೆಯು ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಈಗ ಹೈಕೋರ್ಟ್ ನಲ್ಲಿ ಪ್ರಕರಣವಿದೆ. ಅಲ್ಲಿ ಸಂತ್ರಸ್ತರ ಬೆಂಬಲಿಸಿ ಪ್ರಮಾಣಪತ್ರ ಸಲ್ಲಿಸಿದ್ದೇವೆ. ಸುಪ್ರೀಂಕೋರ್ಟ್ ನಲ್ಲೂ ಸಂತ್ರಸ್ತರಿಗೆ ಜಮೀನು ನೀಡುವುದರ ಪರವಾಗಿ ಪ್ರಮಾಣಪತ್ರ ಸಲ್ಲಿಸುತ್ತೇವೆ ಎಂದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.