ಮನೆ ಸ್ಥಳೀಯ ಬೈಕ್‌- ಟ್ಯಾಂಕರ್ ಲಾರಿ ಅಪಘಾತ: ಇಬ್ಬರು ಸವಾರರ ಸಾವು

ಬೈಕ್‌- ಟ್ಯಾಂಕರ್ ಲಾರಿ ಅಪಘಾತ: ಇಬ್ಬರು ಸವಾರರ ಸಾವು

0

ಮೈಸೂರು: ದ್ವಿಚಕ್ರ ವಾಹನ ಹಾಗೂ ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್‌ ಇಬ್ಬರು ಸವಾರರು ಮೃತಪಟ್ಟ ಘಟನೆ ಇಲ್ಲಿನ ಮಲ್ಲೂಪುರ ಗ್ರಾಮದಲ್ಲಿ ಡಿ. 20ರ ಬುಧವಾರ ನಡೆದಿದೆ.

ತಗಡೂರು ಗ್ರಾಮದ ಶಿವಮಲ್ಲೆಡಗೌಡ ಎಂಬವರ ಪುತ್ರ ಮಹೇಶ್ (24), ಹಾಗೂ ಗ್ರಾಮದ ನಾಗರಾಜು ಎಂಬವರ ಪುತ್ರ ಮಹೇಶ್ (23) ಮೃತ ಕಾರ್ಮಿಕರು.

ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರ್ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕರಾಗಿದ್ದ ಈ ಯುವಕರು ಇಂದು ಬೆಳಗ್ಗೆ ಕಾರ್ಖಾನೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಮಲ್ಲೂಪುರ ಬಳಿ ಟ್ಯಾಂಕರ್ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಟ್ಯಾಂಕರ್ ಲಾರಿ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ.

ಪರಿಣಾಮ ಒಬ್ಬ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಇನ್ನೊರ್ವ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ತೆರಳುವ ವೇಳೆ ಮಾರ್ಗ ಮಧ್ಯೆ ಸಾವನಪ್ಪಿದ್ದಾನೆ. ಇವರಿಬ್ಬರೂ ಚಿಕ್ಕವಯಸ್ಸಿನಿಂದಲೂ ಗೆಳಯರಾಗಿದ್ದರು.

ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಿಳಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಟ್ಯಾಂಕರ್ ಲಾರಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮಾಜಿ ಶಾಸಕ ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.