ಬೆಳಗಾವಿ: ಭವಿಷ್ಯದಲ್ಲಿ ಇಡೀ ದೇಶದಲ್ಲಿಯೇ ಸಕ್ಕರೆ ಉದ್ಯಮ ಅಭಿವೃದ್ಧಿ ಹೊಂದಲಿದೆ ಎಂದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು, ಈ ಉದ್ಯಮದಿಂದ ರಾಜ್ಯ ಸರ್ಕಾರಕ್ಕೆ 25-35 ಸಾವಿರ ಕೋಟಿ ರೂ. ಆದಾಯ ಬರುತ್ತಿದೆ ಎಂದು ತಿಳಿಸಿದರು.
ಶುಕ್ರವಾರ ಬೆಳಗಾವಿಯಲ್ಲಿ ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಸಕ್ಕರೆ ಕಾರ್ಖಾನೆಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಸಚಿವರು, ಜಾಗತಿಕ ವೈಜ್ಞಾನಿಕ ಕ್ರಾಂತಿಯಲ್ಲಿ ಈ ಕ್ಷೇತ್ರವು ಪ್ರಮುಖ ಪಾತ್ರ ವಹಿಸಿದೆ. “ಭಾರತದ ಸಕ್ಕರೆ ಉದ್ಯಮದಿಂದ ಹೆಚ್ಚಿನ ಸಂಖ್ಯೆಯ ಜನ ಉದ್ಯೋಗಗಳನ್ನು ಪಡೆಯಲು ಸಾಧ್ಯವಾಯಿತು” ಎಂದು ಹೇಳಿದರು.
ಸಕ್ಕರೆ ಕಾರ್ಖಾನೆಗಳು ರಾಜ್ಯದ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಸಲಹೆ ನೀಡಿದ ಪಾಟೀಲ್, ಹಿಂದೆ ದೇಶ ಸಕ್ಕರೆಯನ್ನು ಆಮದು ಮಾಡಿಕೊಳ್ಳಬೇಕಾಗಿದ್ದ ಸಮಯವನ್ನು ಅವರು ನೆನಪಿಸಿಕೊಂಡರು. ಆದರೆ ಇಂದು, ಕಬ್ಬು ದೇಶದ ಆರ್ಥಿಕತೆಗೆ ಹೆಚ್ಚು ಕೊಡುಗೆ ನೀಡಿದ ಪ್ರಮುಖ ಬೆಳೆಯಾಗಿದೆ. ಪ್ರಸ್ತುತ ದೇಶದಲ್ಲಿ ಕಬ್ಬು ಬೆಳೆಯುವ ವಿಷಯದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಅಗ್ರಸ್ಥಾನ ಪಡೆಯಲು ಸಜ್ಜಾಗಿದೆ ಎಂದರು.
ರೈತರಿಗೆ ಉತ್ತಮ ಲಾಭಾಂಶವನ್ನು ನೀಡುವ ಏಕೈಕ ಬೆಳೆ ಕಬ್ಬು. ಸಾಂಪ್ರದಾಯಿಕ ಕೃಷಿ ತಂತ್ರಗಳನ್ನು ಅಭ್ಯಾಸ ಮಾಡುವುದರ ಜೊತೆಗೆ ಇಳುವರಿಯನ್ನು ಸುಧಾರಿಸಲು ವಿವಿಧ ಆಧುನಿಕ ವೈಜ್ಞಾನಿಕ ಕೃಷಿ ತಂತ್ರಜ್ಞಾನಗಳನ್ನು ಅನ್ವೇಷಿಸಬೇಕು ಎಂದರು.
ಇದಕ್ಕೂ ಮುನ್ನ ಬಾಗಲಕೋಟೆಯ ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆ ಹಾಗೂ ನಿಪ್ಪಾಣಿಯ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಗೆ ತಾಂತ್ರಿಕ ಶಿಸ್ತಿನ ಸಾಧನೆಗಾಗಿ ಸಚಿವರು ಪ್ರಶಸ್ತಿ ಪ್ರದಾನ ಮಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.