ಮನೆ ರಾಜಕೀಯ ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ

0

ಬೆಂಗಳೂರು: ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.​ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ.

ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್​ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ. ನಿಮ್ಮ ಮನವಿ ಪರಿಶೀಲನೆ ಮಾಡುತ್ತೇನೆ ಎಂದು ದೇವೇಗೌಡರಿಗೆ ಪತ್ರದ ಮೂಲಕ ಅರ್ಜುನ್ ಮುಂಡಾ ಭರವಸೆ ನೀಡಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.​ಡಿ ದೇವೇಗೌಡ ಮತ್ತು ಸಂಸದ ಪ್ರಜ್ವಲ್​ ಕೇಂದ್ರಕ್ಕೆ ಮನವಿ ಮಾಡಿದ್ದರು.