ಮನೆ ಸುದ್ದಿ ಜಾಲ ತುಮಕೂರು: ಸ್ಮಶಾನವಿಲ್ಲವೆಂದು ರಸ್ತೆ ಬದಿಯೇ ತಂದೆ  ಅಂತ್ಯಸಂಸ್ಕಾರ ಮಾಡಿದ ಮಗ

ತುಮಕೂರು: ಸ್ಮಶಾನವಿಲ್ಲವೆಂದು ರಸ್ತೆ ಬದಿಯೇ ತಂದೆ  ಅಂತ್ಯಸಂಸ್ಕಾರ ಮಾಡಿದ ಮಗ

0

ತುಮಕೂರು: ಸ್ಮಶಾನಕ್ಕೆ ಜಾಗವಿಲ್ಲದ ಹಿನ್ನೆಲೆ ರಸ್ತೆ ಬದಿಯೇ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಲಾಗಿದೆ. ತುಮಕೂರು ತಾಲೂಕಿನ ದುರ್ಗದಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನವಿಲ್ಲದ ಕಾರಣ ಮೃತ ವ್ಯಕ್ತಿಯ ಕುಟುಂಬಸ್ಥರು ರಸ್ತೆ ಬದಿಯೇ ಮೃತ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಿದ್ದಾರೆ.

ವಯೋಸಹಜ ಕಾಯಿಲೆಯಿಂದ ದುರ್ಗದಹಳ್ಳಿ ಗ್ರಾಮದ ತಿಮ್ಮರಾಜುರವರ ತಂದೆ ಪೆದ್ದಯ್ಯ ಎಂಬುವರು ಮೃತಪಟ್ಟಿದ್ದರು. ಪೆದ್ದಯ್ಯ ಅವರ ಅಂತ್ಯಸಂಸ್ಕಾರ ಮಾಡಲು ಸ್ಮಶಾನವಿಲ್ಲದ ಕಾರಣ ರಸ್ತೆ ಬದಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ. ತಿಮ್ಮನಾಯಕನಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಬದಿಯೇ ಮಗ ತನ್ನ ತಂದೆಯ ಅಂತ್ಯ ಸಂಸ್ಕಾರ ಮಾಡಿದ್ದಾನೆ.

ದುರ್ಗದಹಳ್ಳಿ ಗ್ರಾಮಕ್ಕೆ ಸ್ಮಶಾನ ಮಂಜೂರು ಮಾಡಿಕೊಡುವಂತೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ತಹಸೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳಿಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದಾರೆ. ಸ್ಮಶಾನಕ್ಕೆ ಜಾಗ ಮಂಜೂರು ಮಾಡದ ಹಿನ್ನೆಲೆ ರಸ್ತೆ ಬದಿಯೇ ಅಂತ್ಯಕ್ರಿಯೆ ಮಾಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದು ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.