ಮೈಸೂರು: ಮೈಸೂರು ತಾಲೂಕಿನ ವರುಣಾ ಗ್ರಾಮದಲ್ಲಿ ಒಳಚರಂಡಿ ಕಾಮಗಾರಿ ವೇಳೆ 11ನೇ ಶತಮಾನಕ್ಕೆ ಸೇರಿದ ಎರಡು ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ ಮಂಜುಳಾ ಅವರು ಕಳುಹಿಸಿಕೊಟ್ಟಿದ್ದಾರೆ.
ಕೈ ಹಾಗೂ ಕಾಲುಗಳಲ್ಲಿ ಗೊಮ್ಮಟ್ಟನ ಶಿಲ್ಪ, ಕೇವಲ ತಲೆ ಮಾತ್ರ ಇರುವ ಒಂದು ಶಿಲ್ಪ ಹಾಗೂ ಹೆಣ್ಣು ದೇವರ ಒಂದು ಶಿಲ್ಪ ಪತ್ತೆಯಾಗಿವೆ. ಈ ಶಿಲ್ಪಗಳು ಪತ್ತೆಯಾಗುತ್ತಿದ್ದಂತೆ ಕುತೂಹಲದಿಂದ ಸ್ಥಳೀಯರು ನೋಡಲು ಸ್ಥಳಕ್ಕೆ ಆಗಮಿಸಿದ್ದು, ಡಾ .ಎನ್.ಎಸ್ ರಂಗರಾಜು, ಡಾ. ಶಶಿಧರ್, ಶ್ರೀ ಪ್ರಸನ್ನ ಕುಮಾರ್ ವಿನೋದ್ ಜೈನ್ ಸಹ ಸ್ಥಳಕ್ಕೆ ಭೇಟಿ ನೀಡಿದ್ದರು.
ಇನ್ನು ಈ ಶಿಲ್ಪಗಳು 11ನೇ ಶತಮಾನದ್ದು ಎನ್ನಲಾಗುತ್ತಿದ್ದು, ಗಂಗರು ಹಾಗೂ ಹೊಯ್ಸಳರ ಆಳ್ವಿಕೆಯಲ್ಲಿ ವರುಣ, ವಾಜಮಂಗಲ ಹಾಗೂ ವರಕೋಡು ದೊಡ್ಡ ಜೈನ ಕೇಂದ್ರಗಳಾಗಿದ್ದವು. ಈ ಪ್ರದೇಶದಲ್ಲಿ ಹಲವಾರು ಶಿಲ್ಪಕಲೆಗಳಿವೆ ಎಂದು ರಂಗರಾಜು ಅವರು ಹೇಳಿದ್ದಾರೆ.
ಶಿಲ್ಪಗಳ ಮೇಲೆ ಮತ್ತಷ್ಟು ಬೆಳಕು ಚೆಲ್ಲುವ ಉತ್ಖನನದ ಯೋಜನೆಯನ್ನು ಸರ್ಕಾರ ಘೋಷಿಸಬೇಕು. ಉತ್ಖನನಕ್ಕೆ ಸಾಕಷ್ಟು ಅವಕಾಶವಿದ್ದು, ವರುಣಾ ಕ್ಷೇತ್ರವನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ಬಗ್ಗೆ ಮಾಹಿತಿ ನೀಡಲಾಗುವುದು. ಇದು ಇತಿಹಾಸವನ್ನು ಸಂರಕ್ಷಿಸಲು ಮತ್ತು ಭವಿಷ್ಯದ ಪೀಳಿಗೆಗೆ ಶಿಲ್ಪಗಳನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.