ಮನೆ ರಾಜಕೀಯ ಸಚಿವ ಅಶ್ವತ್ಥ್ ನಾರಾಯಣ್ ಗೆ ನೇಮಕಾತಿ ಅಕ್ರಮದಲ್ಲಿ ಇತಿಹಾಸವೇ ಇದೆ: ಹೆಚ್.ಡಿ.ಕುಮಾರಸ್ವಾಮಿ

ಸಚಿವ ಅಶ್ವತ್ಥ್ ನಾರಾಯಣ್ ಗೆ ನೇಮಕಾತಿ ಅಕ್ರಮದಲ್ಲಿ ಇತಿಹಾಸವೇ ಇದೆ: ಹೆಚ್.ಡಿ.ಕುಮಾರಸ್ವಾಮಿ

0

ಬೆಂಗಳೂರು(Bengaluru) : ಅಕ್ರಮ ನೇಮಕಾತಿಯಲ್ಲಿ ಸಚಿವ ಡಾ. ಅಶ್ವತ್ಥ್ ನಾರಾಯಣ ಅವರಿಗೆ ತುಂಬಾ ಅನುಭವವಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿ ಅಕ್ರಮದಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ ಅವರಿಗೆ ತುಂಬಾ ಅನುಭವವಿದೆ. ಪರೀಕ್ಷೆ ಬರೆಯದ ನರ್ಸ್ ಗಳಿಗೂ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಈ ಕೆಲಸಗಳಿಗೆ ಅವರಿಗೆ ಪ್ರತ್ಯೇಕ ಹೆಸರಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಶ್ವತ್ ನಾರಾಯಣ ಅವರು ಈಗ ನಾನು ವಿಶ್ವ ಒಕ್ಕಲಿಗೆ ಅಂತಾರೆ,ಅವರು ರಾಜಕೀಯಕ್ಕೆ ಬರುವ ಮೊದಲು ಏನೇನು ಮಾಡಿದ್ದಾರೆ. ಯಾರಿಗೆಲ್ಲಾ ಸರ್ಟಿಫಿಕೇಟ್ ಕೊಡಿಸಿದ್ದಾರೆ ಎಂಬುದು ನನಗೆ ಗೊತ್ತು. ಅವರಿಗೆ ನೇಮಕಾತಿ ಅಕ್ರಮದಲ್ಲಿ ದೊಡ್ಡ ಇತಿಹಾಸವೇ ಇದೆ ಕಿಡಿಕಾರಿದ್ದಾರೆ.