ನವದೆಹಲಿ: ಕೇಂದ್ರ ಸರ್ಕಾರವು ಜಾರಿಗೆ ತರಲು ಮುಂದಾಗಿದ್ದ ಹಿಟ್ ಆ್ಯಂಡ್ ರನ್ ಕಠಿಣ ಕಾನೂನು ವಿರುದ್ಧ ದೇಶಾದ್ಯಂತ ಟ್ರಕ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಟ್ರಕ್ಸ್, ಟ್ಯಾಂಕರ್ಸ್, ಬಸ್ ಸೇರಿದಂತೆ ವಾಣಿಜ್ಯ ಬಳಕೆಯ ವಾಹನಗಳ ಚಾಲಕರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
ಇನ್ನು, ಕರ್ನಾಟಕದಲ್ಲಿ ಜನವರಿ 17ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ಕರೆ ನೀಡಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಹಿಟ್ ಆ್ಯಂಡ್ ರನ್ ಕಠಿಣ ಕಾನೂನು ಜಾರಿ ಸದ್ಯಕ್ಕಿಲ್ಲ ಎಂದು ತಿಳಿಸಿದೆ. ಇದರಿಂದಾಗಿ ಸಂಘಟನೆಗಳು ಅನಿರ್ದಿಷ್ಟಾವಧಿ ಮುಷ್ಕರ ವಾಪಸ್ ಪಡೆದಿವೆ.
ಭಾರತೀಯ ದಂಡ ಸಂಹಿತೆಯು ಈಗ ಭಾರತೀಯ ನ್ಯಾಯ ಸಂಹಿತೆ ಆಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 102ರ ಅಡಿಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ ವಿಧಿಸಲು ಮುಂದಾಗಿರುವುದು ದೇಶಾದ್ಯಂತ ಪ್ರತಿಭಟನೆಗೆ ಕಾರಣವಾಗಿತ್ತು. ಹಾಗಾಗಿ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಆಲ್ ಇಂಡಿಯಾ ಮೋಟರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ನ ಮುಖಂಡರ ಜತೆ ಮಾತುಕತೆ ನಡೆಸಿದ್ದು, ಎಐಎಂಟಿಸಿ ಜತೆ ಚರ್ಚಿಸಿಯೇ ಹಿಟ್ ಆ್ಯಂಡ್ ರನ್ ಕಾನೂನು ಜಾರಿಗೆ ತರಲಾಗುತ್ತದೆ. ಅಲ್ಲಿಯವರೆಗೆ ಕಾನೂನು ಜಾರಿಯಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಭಲ್ಲಾ ಅವರೇ ಪ್ರಕಟಣೆ ಹೊರಡಿಸಿದ್ದಾರೆ.
ಎಐಎಂಟಿಸಿ ಗೌರವಾಧ್ಯಕ್ಷ ಡಾ.ಜಿ.ಆರ್. ಷಣ್ಮುಗಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. “ಕೇಂದ್ರ ಸರ್ಕಾರವು ನಮ್ಮ ಜತೆ ಮಾತನಾಡಿ, ಚರ್ಚಿಸದ ಹೊರತು ಹಿಟ್ ಆ್ಯಂಡ್ ರನ್ ಕಾನೂನು ಜಾರಿಗೊಳಿಸುವುದಿಲ್ಲ ಎಂಬ ಭರವಸೆ ನೀಡಿದೆ. ಹಾಗಾಗಿ, ಟ್ರಕ್ ಚಾಲಕರು ಸೇರಿ ಎಲ್ಲ ಸಂಘಟನೆಗಳ ಕಾರ್ಯಕರ್ತರು ಕೆಲಸಕ್ಕೆ ಹಾಜರಾಗಬೇಕು. ಯಾವುದೇ ಕಾರಣಕ್ಕೂ ಮುಷ್ಕರ, ಪ್ರತಿಭಟನೆ ಕೈಗೊಳ್ಳಬಾರದು. ನಮ್ಮನ್ನು ಸಂಪರ್ಕಿಸದೆ ಕೇಂದ್ರ ಸರ್ಕಾರ ಕಾನೂನು ಜಾರಿಗೆ ತಂದರೆ ಮಾತ್ರ ಹೋರಾಟ ಮಾಡೋಣ” ಎಂದಿದ್ದಾರೆ.
ಹಿಟ್ ಆ್ಯಂಡ್ ರನ್ ಕಾನೂನು
ಹಳೆಯ ಭಾರತೀಯ ದಂಡ ಸಂಹಿತೆಯನ್ನು ಬದಲಿಸುವ ಭಾರತೀಯ ನ್ಯಾಯ್ ಸಂಹಿತಾ (ಬಿಎನ್ಎಸ್) ಅಡಿಯಲ್ಲಿ, ನಿರ್ಲಕ್ಷ್ಯದ ಚಾಲನೆಯಿಂದ ಗಂಭೀರವಾದ ರಸ್ತೆ ಅಪಘಾತವನ್ನು ಉಂಟುಮಾಡುವ ಮತ್ತು ಪೊಲೀಸರಿಗೆ ಅಥವಾ ಆಡಳಿತದ ಯಾವುದೇ ಅಧಿಕಾರಿಗೆ ತಿಳಿಸದೆ ಓಡಿಹೋದ ಚಾಲಕರು 10 ವರ್ಷಗಳವರೆಗೆ ಶಿಕ್ಷೆ ಅಥವಾ 7 ಲಕ್ಷ ರೂ. ದಂಡವನ್ನು ಪಾವತಿಸಬೇಕಾಗುತ್ತದೆ.
ಯಾವುದೇ ದುಡುಕಿನ ಅಥವಾ ನಿರ್ಲಕ್ಷ್ಯದ ಮೂಲಕ ಯಾವುದೇ ವ್ಯಕ್ತಿಯ ಸಾವಿಗೆ ಕಾರಣರಾದವರು ಅಪರಾಧಿ ನರಹತ್ಯೆಗೆ ಸಮನಾಗಿರುವುದಿಲ್ಲ, ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ವಿವರಣೆಯ ಜೈಲುವಾಸದಿಂದ ಶಿಕ್ಷೆಗೆ ಒಳಗಾಗುತ್ತಾರೆ ಮತ್ತು ದಂಡಕ್ಕೆ ಸಹ ಹೊಣೆಗಾರರಾಗುತ್ತಾರೆ ಎಂದು ಹೊಸ ಭಾರತೀಯ ನ್ಯಾಯ ಸಂಹಿತೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಭಾರತೀಯ ದಂಡ ಸಂಹಿತೆ ಪ್ರಕಾರ, ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಆರೋಪಿಗೆ 2 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.