ಮೈಸೂರು: ನಾನು ಖಂಡಿತವಾಗಿಯೂ ನ್ಯಾಷನಲ್ ಲೀಡರ್ ಅಲ್ಲ. ನಾನು ಸಾಮಾನ್ಯ ಹಿನ್ನೆಲೆಯಿಂದ ಬಂದವನು, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಒಳ್ಳೆಯ ಹೆಸರು ಮಾಡಿ, ಸಂಸದನಾಗಿ ಆಯ್ಕೆಯಾಗಿ ಜನರ ಸೇವೆ ಮಾಡುತ್ತಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಅವರು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಇಂದು ಮೈಸೂರು ರಿಂಗ್ ರಸ್ತೆಯ ಸ್ವಚ್ಛತೆಗೆ ಸಂಬಂಧಿಸಿದಂತೆ ವಿವಿಯ ಅಧಿಕಾರಿಗಳ ಸಭೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಮಾಧ್ಯಮಗಳ ಜೊತೆ ಮಾತನಾಡಿ, ಕೆಲಸ ಮಾಡಿಸಲು ಪ್ರತಿಯೊಬ್ಬ ಸಚಿವರ ಕೈ ಕಾಲು ಹಿಡಿದು ಜನರ ಸೇವೆ ಮಾಡುತ್ತಿದ್ದೇನೆ. ನಾನೊಬ್ಬ ಸಂಸದ ಅಷ್ಟೇ. ನಾನು ನ್ಯಾಷನಲ್ ಲೀಡರ್ ಆಗಿದ್ದರೆ, ತಮ್ಮ ಖಾಸಗಿ ಮ್ಯಾಟರ್ಸ್ ಕಂಪನಿಗೆ ಸರ್ಕಾರಿ ಲ್ಯಾಬ್ ನಲ್ಲಿ ಕಾಂಟ್ರಾಕ್ಟ್ ತೆಗೆದುಕೊಳ್ಳಲಾಗುತ್ತಿತ್ತೆ? ಬಿಡಿಎ ಸೈಟ್ ತೆಗೆದುಕೊಳ್ಳುತ್ತಿದ್ದೆ ಎಂದು ಟಾಂಗ್ ನೀಡಿದ್ದಾರೆ.
ನ್ಯಾಷನಲ್ ಲೀಡರ್ ಆದವರು ಮಾತ್ರ ಹೀಗೆ ಮಾಡಲು ಸಾಧ್ಯ. ಅಪ್ಪನಿಗೆ ನೆಲೆ ಒದಗಿಸುವ ರೀತಿಯಲ್ಲಿ ಅವರನ್ನು ಬಾದಾಮಿಗೆ ಓಡಿಸಿ ತಾವು ವರುಣಾ ಕ್ಷೇತ್ರದಲ್ಲಿ ಶಾಸಕರಾಗುವಷ್ಟು ನ್ಯಾಷನಲ್ ಲೀಡರ್ ಅಲ್ಲ ನಾನಲ್ಲ. ಅಪ್ಪ ಮುಖ್ಯಮಂತ್ರಿ ಆದ ಕೂಡಲೇ ವರ್ಗಾವಣೆ ವಿಚಾರದಲ್ಲಿ ನಾನು ಹೇಳಿದ ಲಿಸ್ಟ್ ಗೆ ಮಾತ್ರ ಸಹಿ ಹಾಕಿ ಎಂದು ಇನ್ ಫ್ಲುಯೆನ್ಸ್ ಮಾಡುವಷ್ಟು ನ್ಯಾಷನಲ್ ಲೀಡರ್ ಅಲ್ಲ. ಅದು ಅವರಿಗೆ ಮಾತ್ರ ಸಾಧ್ಯ. ಅಪ್ಪನನ್ನೇ ಡಿಕ್ಟೇಟ್ ಮಾಡುವಷ್ಟು ಲೀಡರ್ ನಾನಲ್ಲ. ಯತೀಂದ್ರ ಸಿದ್ದರಾಮಯ್ಯ ಮೈಸೂರು ಭಾಗದ ನ್ಯಾಷನಲ್ ಲೀಡರ್ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.
ರಾಮನ ಪೇಟೆಂಟ್ ಅನ್ನು ಬಿಜೆಪಿಗೆ ಕೊಟ್ಟಿದ್ದೇ ಕಾಂಗ್ರೆಸ್. ರಾಮನನ್ನು ಕಾಂಗ್ರೆಸ್ಸಿಗರು ಭಕ್ತಿ ಭಾವದಿಂದ ಪೂಜಿಸಿದರೆ ಬಿಜೆಪಿಗೆ ಯಾಕೆ ಈ ಪೇಟೆಂಟ್ ಸಿಗುತ್ತಿತ್ತು. ರಾಮನ ಅಸ್ತಿತ್ವವನ್ನೇ ನ್ಯಾಯಾಲಯದಲ್ಲಿ ಪ್ರಶ್ನಿಸಿದ ಕಾಂಗ್ರೆಸ್ ಗೆ ಇದನ್ನು ಕೇಳುವ ನೈತಿಕತೆ ಇಲ್ಲ. ಕಾಂಗ್ರೆಸ್ಗೆ ರಾಮ ರಾಜ್ಯದ ಮೇಲೆ ನಂಬಿಕೆ ಇದೆಯಾ? ಅಥವಾ ರಾವಣ ರಾಜ್ಯದ ಮೇಲೆ ನಂಬಿಕೆ ಇದೆಯಾ? ಎಂದು ಅವರನ್ನೇ ಕೇಳಬೇಕು. ಕಾಂಗ್ರೆಸ್ಗೆ ಗಾಂಧೀಜಿಯವರ ರಾಮರಾಜ್ಯದ ಮೇಲೆ ನಂಬಿಕೆ ಇಲ್ಲ ಎಂದರು.
ಅಯೋಧ್ಯೆಯ ಮಂತ್ರಾಕ್ಷತೆಗೆ ಅನ್ನಭಾಗ್ಯ ಅಕ್ಕಿ ಬಳಸಿದ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಂಸದರು, ಮಂತ್ರಾಕ್ಷತೆ ಸ್ವೀಕರಿಸಲು ಆಗದ ಕೈಗಳಿಗೆ ಮಂತ್ರಾಕ್ಷತೆ ಅಕ್ಕಿ ಕೊಡಲು ಹೇಗೆ ಮನಸ್ಸು ಬರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದರು
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.