ಬೆಂಗಳೂರು: ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಡೆಯುವ ಪಥಸಂಚಲನದಲ್ಲಿ ರಾಜ್ಯದ ಟ್ಯಾಬ್ಲೋಗೆ ಅವಕಾಶ ಸಿಕ್ಕಿಲ್ಲ. ಇದರ ಹಿಂದೆ ಬೇರೆ ರಾಜ್ಯಗಳಿಗೂ ಅವಕಾಶ ಕೊಡಬೇಕು ಎನ್ನುವ ಉದ್ದೇಶವಿದೆಯೇ ಹೊರತು ಕರ್ನಾಟಕಕ್ಕೆ ಅವಕಾಶ ಕೊಡಬಾರದು ಎನ್ನುವ ದುರುದ್ದೇಶ ಇಲ್ಲವೆಂದು ಕೇಂದ್ರದ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ.
ನಗರದ ಹೊರವಲಯದ ರಮಾಡ ರೆಸಾರ್ಟ್ನಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಮತ್ತು ಕಾಂಗ್ರೆಸ್ ಮುಖಂಡರಿಗೆ ರಾಜ್ಯದ ನೆಲ, ಸಂಪತ್ತಿನ ಬಗ್ಗೆ ಅಪಾರ ಗೌರವ ಇದ್ದರೆ ಮೊದಲನೆಯದಾಗಿ ಬೆಳಗಾವಿ ವಿಚಾರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆ ಬಗ್ಗೆ ಸಚಿವರು ತಮ್ಮ ಅಭಿಪ್ರಾಯ ತಿಳಿಸಲಿ. ಈ ರಾಜ್ಯದ ನೆಲ ಜಲದ ವಿಚಾರದಲ್ಲಿ ಕಾಳಜಿಯಲ್ಲಿ ಇದ್ದರೆ ಕಾವೇರಿ ವಿಚಾರದಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳಲಿ ಎಂದು ಸವಾಲು ಹಾಕಿದ್ದಾರೆ.ಟ್ಯಾಬ್ಲೋ ವಿಚಾರದಲ್ಲಿ ಹೇಳುವುದಾದರೆ ಗಣರಾಜ್ಯೋತ್ಸವದಂದು ಪಥಸಂಚಲನದಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯಕ್ಕೆ 14 ವರ್ಷಗಳಿಂದ ನಿರಂತರವಾಗಿ ಅವಕಾಶ ಸಿಕ್ಕಿದೆ. ಈಗ ಕೊಡುವುದಿಲ್ಲ ಎಂದು ಹೇಳಿಲ್ಲ, ಕಳೆದ ಬಾರಿ ಅವಕಾಶ ಸಿಗದೇ ಇದ್ದಾಗ ನಮ್ಮ ಹಿರಿಯರೆಲ್ಲರ ಪ್ರಯತ್ನದ ನಂತರ ಅವಕಾಶ ಸಿಕ್ಕಿತ್ತು. ಆದರೆ ಈ ಬಾರಿ ಕರ್ನಾಟಕ ಮಾತ್ರವಲ್ಲ, ಗೋವಾ ಸೇರಿದಂತೆ ನಾಲ್ಕೈದು ರಾಜ್ಯಗಳಿಗೆ ಸಿಕ್ಕಿಲ್ಲ. ಯಾರಿಗೆ ಈ ಬಾರಿ ಅವಕಾಶ ಸಿಗುತ್ತಿಲ್ಲವೋ ಅವರಿಗೆ ವಸ್ತು ಪ್ರದರ್ಶನದಲ್ಲಿ ತಮ್ಮ ಟ್ಯಾಬ್ಲೋ ಇಡುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದನ್ನು ಅರ್ಥಮಾಡಿಕೊಳ್ಳುವುದನ್ನು ಬಿಟ್ಟು ನಾಡಿನ ಬಗ್ಗೆ ಕಾಂಗ್ರೆಸ್ ಮೊಸಳೆ ಕಣ್ಣೀರು ಹಾಕುತ್ತಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಕನ್ನಡಪರ ಹೋರಾಟಗಾರ ನಾರಾಯಣ ಗೌಡ ವಿಚಾರದಲ್ಲಿ ಯಾವ ರೀತಿ ನಡೆದುಕೊಂಡಿದೆ ಅನ್ನೋದನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಮೊನ್ನೆ ಒಂದು ಪ್ರಕರಣದಲ್ಲಿ ಬಿಡುಗಡೆಯಾದರೆ ಮತ್ತೊಂದು ಪ್ರಕರಣದಲ್ಲಿ ಒಳಗಡೆ ಹಾಕಿಸುವ ಪಿತೂರಿಯನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಆರೋಪಿಸಿದರು.
ಟ್ಯಾಬ್ಲೋ ವಿಚಾರದಲ್ಲಿ ಕೇಂದ್ರದ ಜೊತೆ ಮಾತುಕತೆ ನಡೆಸಲು ಸಮಯ ಸಂದರ್ಭ ಬರಲಿದೆ. ಈಗಾಗಲೇ ಟ್ಯಾಬ್ಲೋಗಳ ಬಗ್ಗೆ ತೀರ್ಮಾನ ಆಗಿದೆ. ಮುಂದಿನ ವರ್ಷ ಅವಕಾಶ ಕೊಡುವುದಾಗಿ ಈಗಾಗಲೇ ತಿಳಿಸಿದ್ದಾರೆ. ಹಾಗಾಗಿ ಎಲ್ಲ ವಿಚಾರದಲ್ಲೂ ಕೇಂದ್ರ ಸರ್ಕಾರವು ರಾಜ್ಯದ ವಿರುದ್ಧವಾಗಿ ಇದೆ ಎಂದು ಕಾಂಗ್ರೆಸ್ ಬಿಂಬಿಸುತ್ತಿರುವುದನ್ನು ನಾಡಿನ ಜನ ಗಮನಿಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಇಂದಿನ ಸಭೆ ವಿಚಾರದ ಕುರಿತು ಮಾತನಾಡಿದ ಅವರು, ಬಿಜೆಪಿ ಸಂಘಟನಾ ದೃಷ್ಟಿಯಿಂದ, ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕರೆದಿರೋ ಸಭೆ ಇದಾಗಿದ್ದು, ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.