ಬೆಂಗಳೂರು: ಇಡೀ ದೇಶದ ಜನರು ಶ್ರೀರಾಮಮಂದಿರದ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಯುತ್ತಿರುವಾಗ, ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ತನ್ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ ತೋರಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲ ಸಮುದಾಯಗಳು ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾಯುತ್ತಿವೆ. ಆದರೆ ರಾಮಮಂದಿರದ ಕಾರ್ಯಕ್ರಮಕ್ಕೆ ಹೋಗದಿರುವುದು ಕಾಂಗ್ರೆಸ್ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ. ಮುಸ್ಲಿಮರ ಓಲೈಕೆಗಾಗಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಅವರಾದರೂ ನಮ್ಮ ಕೈ ಹಿಡಿಯಲಿ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರು ಇಂತಹ ತೀರ್ಮಾನಕ್ಕೆ ಬಂದಿದ್ದಾರೆ. ಇದು ಕಾಂಗ್ರೆಸ್ಗೆ ಹಿಂದಿನಿಂದಲೇ ಬೆಳೆದು ಬಂದ ಚಾಳಿ ಎಂದರು.
ಹಿಂದೆ ನ್ಯಾಯಾಲಯದಲ್ಲಿ ಪ್ರಕರಣ ನಡೆಯುವಾಗ ರಾಮ ಹುಟ್ಟಿರುವುದಕ್ಕೆ ಜನ್ಮ ಪ್ರಮಾಣ ಪತ್ರ ಇದೆಯೇ ಎಂದು ಕಾಂಗ್ರೆಸ್ ಕೇಳಿತ್ತು. ರಾಮಜನ್ಮಭೂಮಿಯ ಕುರುಹುಗಳ ಬಗ್ಗೆ ಸಂದೇಹವನ್ನೂ ವ್ಯಕ್ತಪಡಿಸಿದ್ದರು. ರಾಮಾಯಾಣ ಕಾಲ್ಪನಿಕ, ಅದು ನಡೆದೇ ಇಲ್ಲ ಎಂದು ಅವರು ವಾದಿಸಿದ್ದರು. ಹಿಂದೂಗಳನ್ನು ಕಂಡರೆ ಕಾಂಗ್ರೆಸ್ಗೆ ಮೊದಲಿಂದಲೂ ಅಲರ್ಜಿ. ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಈ ರೀತಿ ತೀರ್ಮಾನ ಕೈಗೊಂಡಿರುವುದರಿಂದ ಹಿಂದೂಗಳನ್ನು ಕಡೆಗಣಿಸಿದಂತಾಗಿದೆ ಎಂದರು.
ಶ್ರೀರಾಮಮಂದಿರ ಉದ್ಘಾಟನೆ ವೇಳೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯಾಗಲಿದೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಲ್ಲ ಕಡೆ ರಾಮ ಎನ್ನುತ್ತಾರೆ, ಸಿದ್ದರಾಮಯ್ಯನವರು ನನ್ನ ಹೆಸರಲ್ಲೇ ರಾಮ ಇದೆ ಎನ್ನುತ್ತಾರೆ. ಆದರೂ ಅವರು ಯಾರೂ ಉದ್ಘಾಟನೆಗೆ ಹೋಗುವುದಿಲ್ಲ. ಇಡೀ ದೇಶದ ಜನರು ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ನಾನು ಸಂಗ್ರಹಿಸಿದ ಆರೇಳು ಕೋಟಿ ರೂಪಾಯಿ ದೇಣಿಗೆಯಲ್ಲಿ ಸುಮಾರು 1 ಕೋಟಿ ರೂಪಾಯಿಯನ್ನು ಮುಸ್ಲಿಮರು ನೀಡಿದ್ದರು. ಕಾಂಗ್ರೆಸ್ ನಾಯಕರು ಕುತಂತ್ರ ಮಾಡಿ ಹಿಂದೂ ಮುಸ್ಲಿಮರನ್ನು ಒಡೆಯುತ್ತಿದ್ದಾರೆ. ಇಂತಹ ನೀಚ ಬುದ್ಧಿಗಳಿಗೆ ಶ್ರೀರಾಮನೇ ಬುದ್ಧಿ ಕಲಿಸುತ್ತಾನೆ. ಕಾಂಗ್ರೆಸ್ ನಾಯಕರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಹರಿಹಾಯ್ದರು.
ಮಾಲ್ಡೀವ್ಸ್ ವಿಚಾರವಾಗಿ ಹಿರಿಯ ನಾಯಕರಾದ ಶರದ್ ಪವಾರ್, ಚಿತ್ರನಟರು, ಸಾಮಾನ್ಯ ಜನರು ಪ್ರಧಾನಿ ಮೋದಿಗೆ ಬೆಂಬಲಿಸಿದ್ದಾರೆ. ಆದರೆ ಸೋನಿಯಾ ಗಾಂಧಿ ಗುಂಪು, ಪ್ರಧಾನಿಗೆ ಅಪಮಾನವಾದರೂ ಪರವಾಗಿಲ್ಲ, ನಮ್ಮ ಬೇಳೆ ಬೇಯಿಸಿಕೊಳ್ಳಬೇಕು ಎಂಬಂತೆ ಹೇಳಿಕೆ ಕೊಟ್ಟಿದ್ದಾರೆ. ಒಟ್ಟಾರೆಯಾಗಿ ಅವರು ಮುಸ್ಲಿಮ್ ಓಲೈಕೆ ರಾಜಕಾರಣ ಮಾಡುತ್ತಾ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದಾರೆ ಎಂದರು.
ಬಿಜೆಪಿ ಸಭೆ
ಬಿಜೆಪಿ ಸಭೆಯ ಕುರಿತು ಮಾಹಿತಿ ನೀಡಿದ ಆರ್.ಅಶೋಕ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುವ ಕುರಿತು ಚರ್ಚಿಸಲಾಗಿದೆ. ಯಾವುದೇ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ. ಆಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ಸಮೀಕ್ಷೆ ಮಾಡಿದ್ದು, ಎಲ್ಲವನ್ನೂ ಅವರೇ ತೀರ್ಮಾನಿಸುತ್ತಾರೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.