ಶಿವಮೊಗ್ಗ: ಯುವನಿಧಿ ಕಾರ್ಯಕ್ರಮವು ರಾಜ್ಯದ ಯುವಜನತೆಯ ಕಣ್ಣಿಗೆ ಮಣ್ಣೆರಚುವ ತಂತ್ರ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಭರವಸೆ ನೀಡಿತ್ತು. ಗ್ಯಾರಂಟಿ ಅಲೆಯ ಮೇಲೆ ಅಧಿಕಾರಕ್ಕೆ ಕಾಂಗ್ರೆಸ್ ಬಂದಿತ್ತು. ಈಗ ನಿಯಮಗಳನ್ನು ಹೇರುತ್ತಿದ್ದಾರೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಲೂ ಐದಾರು ಯುನಿವರ್ಸಿಟಿಯ ಮಕ್ಕಳಿಗೆ ಈ ಸೌಲಭ್ಯ ಸಿಗಲ್ಲ. ನಿರುದ್ಯೋಗಿಗಳ ಮತ ಪಡೆದು ಈಗ ಎಪಿಎಲ್, ಬಿಪಿಎಲ್ ಎನ್ನುತ್ತಿದ್ದಾರೆ. ಯುವಕರಿಗೆ, ಮತದಾರರಿಗೆ ದ್ರೋಹ ಮಾಡುವ ಕೆಲಸವಾಗುತ್ತಿದೆ. ಲೋಕಸಭಾ ಚುನಾವಣೆಯನ್ನು ಮುಂದೆ ಇಟ್ಟುಕೊಂಡು ಯುವಕರನ್ನು ಮರಲು ಮಾಡುತ್ತಿದ್ದಾರೆ. ಕಂಡಿಷನ್ ಹಾಕಿ ಸಂಖ್ಯೆ ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣಾ ಮುಗಿದ ಮೇಲೆ ಈ ಗ್ಯಾರಂಟಿ ಮುಂದುವರೆಯಲ್ಲ. ಯುವಕರಿಗೆ ಭರವಸೆ ಕೊಟ್ಟ ರೀತಿ ನಡೆದುಕೊಳ್ಳಬೇಕಿತ್ತು ಎಂದರು.
ಕೇಂದ್ರ ವಿಶ್ವಕರ್ಮ ಯೋಜನೆಯ ಮೂಲಕ 13 ಸಾವಿರ ಕೋಟಿಯ ಯೋಜನೆ ನೀಡಿದ್ದಾರೆ. ಗ್ಯಾರಂಟಿಗಳ ಮೂಲಕ ಹಣ ದುರುಪಯೋಗವಾಗುತ್ತಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತು ಹೋಗಿದೆ. ನಿಷ್ಕ್ರಿಯ ಸರ್ಕಾರ ಯುವಕರಿಗೆ ಮೋಸ ಮಾಡಿದೆ ಎಂದು ರಾಘವೇಂದ್ರ ದೂರಿದರು.
ನಾನೇ ಫ್ರೀಡಂ ಪಾರ್ಕ್ ಮಾಡಿಸಿದ್ದೆಂದು ಸಿಎಂ ಹೇಳಿದ್ದಾರೆ. ಅವರಿಗೆ ತಪ್ಪು ಮಾಹಿತಿ ಇರಬೇಕು. ಫ್ರೀಡಂ ಪಾರ್ಕ್ ಅಭಿವೃದ್ಧಿ ಪಡಿಸಿದ್ದು ಯಡಿಯೂರಪ್ಪನವರು. 48 ಗಂಟೆಯಲ್ಲಿ ಆದೇಶ ಮಾಡಿ ನಮ್ಮ ಸರ್ಕಾರ ಅಭಿವೃದ್ಧಿಪಡಿಸಿದೆ. 2019ರಲ್ಲಿಯೇ ಅಲ್ಲಮಪ್ರಭುಗಳ ಹೆಸರು ಇಡಲು ಸುತ್ತೂರು ಶ್ರೀಗಳು ಹೇಳಿದ್ದರು. ಆ ಸಭೆಯಲ್ಲಿ ಯಡಿಯೂರಪ್ಪನವರು ಸಹ ಇದ್ದರು. ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಹೆಸರು ಇಡುವುದು ಸೂಕ್ತ ಇದೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.