ಮನೆ ಅಪರಾಧ ಭತ್ತ ಕಟಾವು ಮಾಡುವ ಲಾರಿ  ಡಿಕ್ಕಿ: ಮೂವರು ಬೈಕ್ ಸವಾರರು ಸಾವು

ಭತ್ತ ಕಟಾವು ಮಾಡುವ ಲಾರಿ  ಡಿಕ್ಕಿ: ಮೂವರು ಬೈಕ್ ಸವಾರರು ಸಾವು

0

ಚಾಮರಾಜನಗರ: ಭತ್ತ ಕಟಾವು ಮಾಡುವ ಲಾರಿ  ಡಿಕ್ಕಿ ಹೊಡೆದ ಪರಿಣಾಮ ಬೈಕ್​ ನಲ್ಲಿ ಹೋಗುತ್ತಿದ್ದ ಮೂವರು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಸಮೀಪ ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ನಿವಾಸಿಗಳಾದ ಪತಿ ಸಂತೋಷ್(32), ಪತ್ನಿ ಸೌಮ್ಯ(27) ಹೆಣ್ಣು ಮಗು ನಿತ್ಯಸಾಕ್ಷಿ (4) ಮೃತ ದುರ್ದೈವಿಗಳು.

ಗಾಯಗೊಂಡ ಮಗ ಅಭಿ(9) ಯನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಳ್ಳೇಗಾಲ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸ್ಥಳಕ್ಕೆ ಕೊಳ್ಳೆಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.