ಮನೆ ರಾಜ್ಯ ಸುಳ್ಳು ಹೇಳುವುದು, ಜನರನ್ನು ವಂಚಿಸುವುದು ಸಿಎಂ ಸಿದ್ದರಾಮಯ್ಯಗೆ ಚೆನ್ನಾಗಿಯೇ ‘ಸಿದ್ದಿ’ಸಿದೆ: ಬಿಜೆಪಿ

ಸುಳ್ಳು ಹೇಳುವುದು, ಜನರನ್ನು ವಂಚಿಸುವುದು ಸಿಎಂ ಸಿದ್ದರಾಮಯ್ಯಗೆ ಚೆನ್ನಾಗಿಯೇ ‘ಸಿದ್ದಿ’ಸಿದೆ: ಬಿಜೆಪಿ

0

ಬೆಂಗಳೂರು : ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿ ಸೃಷ್ಟಿಸುವುದು, ಇದೆಲ್ಲವೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಚೆನ್ನಾಗಿಯೇ ‘ಸಿದ್ದಿ’ಸಿದೆ ಎಂದು ಬಿಜೆಪಿ  ಟಾಂಗ್ ನೀಡಿದೆ.

ಸಾಮಾಜಿಕ ಮಾಧ್ಯಮ ಎಕ್ಸ್​​ ನಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಬಿಜೆಪಿ, ನಕಲಿ ಸುದ್ದಿಗಳನ್ನು ರಚಿಸುತ್ತಾ ಕಾಲಹರಣ ಮಾಡುವ ಬದಲು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಸಿಎಂ ಯೋಚಿಸಿದ್ದರೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿರಲಿಲ್ಲ, ಮಹಿಳೆಯರ ಮೇಲೆ ಹಲ್ಲೆ ನಡೆಯುತ್ತಿರಲಿಲ್ಲ ಎಂದು ಉಲ್ಲೇಖಿಸಿದೆ. ಜತೆಗೆ ಎಡಿಟಿಂಗ್ ಮಾಸ್ಟರ್ ಎಂದು ಸಿದ್ದರಾಮಯ್ಯ ಅವರನ್ನು ಕುಹಕವಾಡಿದೆ.

ಎಲ್ಲೆಂದರಲ್ಲಿ ನಿದ್ದೆಗೆ ಜಾರುವುದು ನೀವೇ ಎಂಬುದು ಜಗತ್ತಿಗೆ ತಿಳಿದಿರುವ ವಿಷಯ. ದಿನಕ್ಕೆ 18 ಗಂಟೆ ಕೆಲಸ ಮಾಡುವ ಪ್ರಧಾನಿಯವರನ್ನು ಅವಹೇಳನ ಮಾಡಿದರೆ ಜನರು ನಂಬುತ್ತಾರೆ ಎಂಬ ಭ್ರಮೆಯಿಂದ ಆದಷ್ಟು ಬೇಗ ಹೊರ ಬನ್ನಿ. ಸರ್ಕಾರವನ್ನು ಮೋದಿ ಮಾದರಿಯಲ್ಲಿ ಮುನ್ನಡೆಸಿ ಜನರ ಸಮಸ್ಯೆ ಬಗೆಹರಿಸಿ‌ ಎಂದು ಬಿಜೆಪಿ ಹೇಳಿದೆ.

ಮುಂದುವರಿದು, ಮಜವಾದಿ ಸಿದ್ದರಾಮಯ್ಯ ಅವರು ನಿದ್ದೆಗೆ ಶರಣಾಗುವಂತೆ ಮಾಡುವ ಅಂಶಗಳು ಎಂದು ಒಂದಿಷ್ಟು ವಿಚಾರಗಳನ್ನು ಪಟ್ಟಿ ಮಾಡಿದೆ. ರೈತರಿಗೆ ಕೊಡುವ ಪರಿಹಾರ, ಕರ್ನಾಟಕಕ್ಕೆ ಕಾವೇರಿ ನೀರು, ಮಹಿಳೆಯರಿಗೆ ಕೊಡಬೇಕಾದ ರಕ್ಷಣೆ, ಹಿಂದೂ ದೇವಾಲಯಗಳಿಗೆ ಅನುದಾನ, ಈಡೇರಿಸಲಾಗದ ಗ್ಯಾರಂಟಿಗಳು ಇವು ಸಿದ್ದರಾಮಯ್ಯ ನಿದ್ದೆಗೆ ಶರಣಾಗುವಂತೆ ಮಾಡುವ ಅಂಶಗಳು ಎಂದು ಬಿಜೆಪಿ ಟೀಕಿಸಿದೆ.

ಮೌಲ್ವಿಗಳಿಗೆ 10 ಸಾವಿರ ಕೋಟಿ ರೂಪಾಯಿ ಕೊಡಬೇಕು, ಮತಾಂಧ ಜಿಹಾದಿಗಳನ್ನು ರಕ್ಷಣೆ ಮಾಡಬೇಕು, ಪಿಎಫ್ ಐ ಗೂಂಡಾಗಳನ್ನು ಅಮಾಯಕರೆಂದು ಬಿಡಬೇಕು, ಶಾಲೆಗಳಲ್ಲಿ ಹಿಜಾಬ್ ಹಾಕಿಕೊಂಡು ಹೋಗಬಹುದು, ಗ್ಯಾಂಗ್ ರೇಪ್ ಮಾಡಿದವರನ್ನು ಹೊರ ಬಿಡಬೇಕು ಎಂಬುದು ಸಿದ್ದರಾಮಯ್ಯ ಸಾಹೇಬ್ರು ನಿದ್ದೆಯಿಂದ ತಕ್ಷಣವೇ ಎಚ್ಚರಗೊಳ್ಳುವಂತೆ ಮಾಡುವ ಅಂಶಗಳು ಎಂದು ಬಿಜೆಪಿ ಲೇವಡಿ ಮಾಡಿದೆ. ಜತೆಗೆ, ಇದೇ ಮಜವಾದಿಯ ತುಘಲಕ್ ದರ್ಬಾರ್ ಎಂದು ಬಿಜೆಪಿ ಟೀಕಿಸಿದೆ.