ಬೆಂಗಳೂರು: ನಗರದಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟವಾಗಿದೆ. ಬೆಂಗಳೂರಿನ ಶಾಂತಲಾ ಸಿಗ್ನಲ್ ನಲ್ಲಿ ನಿನ್ನೆ ಮಧ್ಯ ರಾತ್ರಿ 2 ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.
ಎರಡು ಕೆಎಸ್ ಆರ್ ಟಿಸಿ ಬಸ್ ಗಳ ಗ್ಲಾಸ್ ಗಳು ಪುಡಿ ಪುಡಿಯಾಗಿವೆ. ಇಮ್ರಾನ್ ಮತ್ತು ಆರೀಫ್ ಎಂಬ ಇಬ್ಬರು ಕಿಡಿಗೇಡಿಗಳು ದೊಣ್ಣೆಯಿಂದ ಗ್ಲಾಸ್ ಹೊಡೆದಿದ್ದಾರೆ ಎನ್ನಲಾಗಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ 2 ಕೆಎಸ್ ಆರ್ ಟಿಸಿ ಬಸ್ ಗಳು ಶಾಂತಲಾ ಸಿಗ್ನಲ್ ಬಳಿ ನಿಂತಿವೆ. ಹಿಂದೆಯೇ 1 ಆಟೋ, ಎರಡು ಬೈಕ್ ಗಳಲ್ಲಿ ಬಂದಿದ್ದ ಐವರು ಪುಂಡರು ಏಕಾಏಕಿ ರಾಡ್, ದೊಣ್ಣೆ, ಕಲ್ಲುಗಳಿಂದ ಕೆಎಸ್ ಆರ್ ಟಿಸಿ ಬಸ್ ನ ಗಾಜು ಹೊಡೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಮಧ್ಯರಾತ್ರಿ 1.45ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆ ನಡೆಯಲು ಕಾರಣ ಏನು ಎಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಸದ್ಯ ಕಾಟನ್ ಪೇಟೆ ಪೊಲೀಸರು ಇಮ್ರಾನ್ ಮತ್ತು ಆರೀಫ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.