ಮಂಡ್ಯ:ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಗೆ ಕೇವಲ 4 ದಿನಗಳು ಬಾಕಿ ಉಳಿವೆ.ಈ ಐತಿಹಾಸಿಕ ದಿನಕ್ಕಾಗಿ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ವಿಶೇಷವೆಂದರೆ ಬಾಲರಾಮನ ಪ್ರಾಣಪ್ರತಿಷ್ಠೆ ದಿನವೇ ಮಂಡ್ಯದಲ್ಲೂ ರಾಮಮಂದಿರ ಲೋಕಾರ್ಪಣೆಗೊಳ್ಳಲಿದೆ.
ಜನವರಿ 22ರಂದು ರಾಮಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಅದೇ ದಿನ ಮಂಡ್ಯದಲ್ಲೂ ರಾಮಮಂದಿರ ಲೋಕಾರ್ಪಣೆಗೊಳ್ಳಲಿದೆ. ವಿಶೇಷವೆಂದರೆ ಈ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಮೂರ್ತಿಯನ್ನು ಕೂಡಾ ಶಿಲ್ಪಿ ಅರುಣ್ ಯೋಗಿರಾಜ್ ಅವರೇ ಕೆತ್ತನೆ ಮಾಡಿದ್ದಾರೆ.
ಮಂಡ್ಯದ ಲೇಬರ್ ಕಾಲೋನಿಯಲ್ಲಿ ನೂತನವಾಗಿ ರಾಮಮಂದಿರ ನಿರ್ಮಾಣಗೊಂಡಿದೆ. ರಾಮನ ವಿಗ್ರಹ ಸುಮಾರು 3-4 ಅಡಿ ಎತ್ತರವಿದೆ. ರಾಮನ ಮೂರ್ತಿ ಜೊತೆ ಶಿಲ್ಪಿ ಅರುಣ್ ಯೋಗಿರಾಜ್ ಸೀತೆ, ಲಕ್ಷ್ಮಣ ಹಾಗೂ ಹನುಮಂತನ ವಿಗ್ರಹವನ್ನೂ ಕೆತ್ತನೆ ಮಾಡಿಕೊಟ್ಟಿದ್ದಾರೆ. ಈ ಮೂರ್ತಿಗಳನ್ನು 1 ವರ್ಷದ ಹಿಂದೆಯೇ ಕೆತ್ತನೆ ಮಾಡಿಕೊಟ್ಟಿದ್ದರು.
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಂದೇ ಮಂಡ್ಯದಲ್ಲಿಯೂ ರಾಮನ ಪ್ರತಿಷ್ಠಾಪನೆ ಮಾಡಬೇಕೆಂದು ದೇವಾಲಯದ ಟ್ರಸ್ಟ್ ತೀರ್ಮಾನಿಸಿತ್ತು. ಲೇಬರ್ ಕಾಲೋನಿ ನಿವಾಸಿಗಳೇ ಟ್ರಸ್ಟ್ ರಚಿಸಿಕೊಂಡು ಈ ದೇವಾಲಯವನ್ನು ನಿರ್ಮಿಸಿದ್ದಾರೆ. ದೇವಾಲಯ ಲೋಕಾರ್ಪಣೆ ದಿನ ಹತ್ತಿರವಾಗುತ್ತಿದ್ದಂತೆ ಕಾಲೋನಿ ನಿವಾಸಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯ ಪೂಜಾ ಕೈಂಕರ್ಯದಂತೆ ಇಲ್ಲಿಯೂ ದೇಗುಲ ಲೋಕಾರ್ಪಣೆ ನಡೆಯಲಿದೆ ಎಂದು ಟ್ರಸ್ಟಿಗಳು ತಿಳಿಸಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.