ಕೆ .ಆರ್.ನಗರ: ಪಟ್ಟಣದ ಪುರಸಭೆ ಕಛೇರಿಗೆ ಲೋಕಾಯುಕ್ತ ಡಿವೈಎಸ್ ಪಿ ಎಸ್.ಕೆ.ಮಾಲ್ತೇಶ್ ಮತ್ತು ಇನ್ಸ್ಪೆಕ್ಟರ್ ರವಿಕುಮಾರ್ ದಿಢೀರ್ ಭೇಟಿ ನೀಡಿ ಮೂರು ಗಂಟೆಗಳ ಕಾಲ ಕಡತ ಪರಿಶೀಲನೆ ನಡೆಸಿದರು.
ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಿದ ಅವರುಗಳು ಕಾಮಗಾರಿ, ಜನನ ಮತ್ತು ಮರಣ ಪ್ರಮಾಣ ಪತ್ರ, ನಿವೇಶನ ಮತ್ತು ಮನೆ ಖಾತೆ ಸೇರಿದಂತೆ ಇತರ ಎಲ್ಲಾ ಕಡತಗಳನ್ನು ಸಮಗ್ರವಾಗಿ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಾಯುಕ್ತ ಡಿವೈಎಸ್ ಪಿ, ಕಛೇರಿಯಲ್ಲಿ ೫೦೦ ಕಡತಗಳು ವಿಲೇವಾರಿಯಾಗದೆ ಬಾಕಿ ಇದ್ದು, ಇದರ ಜತೆಗೆ ಸಾರ್ವಜನಿಕ ಕೆಲಸಗಳನ್ನು ಮಾಡಿಕೊಡಲು ಸಿಬ್ಬಂದಿ ಅನಗತ್ಯವಾಗಿ ಅಲೆದಾಡಿಸುತ್ತಾರೆ ಎಂಬ ವ್ಯಾಪಕವಾದ ದೂರುಗಳಿದ್ದು ಇದನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ ವಿಚಾರ ತಿಳಿದು ಆಗಮಿಸಿದ ಕೆಲವು ನಾಗರಿಕರು ತಮ್ಮ ಅಹವಾಲುಗಳನ್ನು ಹೇಳಿಕೊಂಡಾಗ ಇದಕ್ಕೆ ಸ್ಪಂದಿಸಿದ ಅವರುಗಳು ಕೂಡಲೇ ಸಂಬಂಧಿತರಿಗೆ ಆದೇಶಿಸಿ ಅವರ ಕಛೇರಿ ಕೆಲಸಗಳನ್ನು ಕೂಡಲೇ ಮಾಡಿಕೊಡಬೇಕು ಎಂದು ತಾಕೀತು ಮಾಡಿದರು.
ಪುರಸಭೆ ವ್ಯಾಪ್ತಿಯಲ್ಲಿ ಇರುವ ೭೨ ವಾಣಿಜ್ಯ ಮಳಿಗೆಗಳ ಅವಧಿ ಮುಗಿದಿದ್ದರೂ ಹರಾಜು ಮಾಡುತ್ತಿಲ್ಲ ಎಂದು ಸಾರ್ವಜನಿಕರಿಂದ ನಮ್ಮ ಕಛೇರಿಗೆ ಹಲವು ದೂರುಗಳು ಬಂದಿದ್ದು, ಈ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ದಾಖಲಾತಿಗಳನ್ನು ತರಿಸಿಕೊಂಡು ನಿಯಮಾನುಸಾರ ಹರಾಜು ಮಾಡುವಂತೆ ಸೂಚನೆ ನೀಡುವುದಾಗಿ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.