ಅಯೋಧ್ಯೆ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಮೂರು ದಿನಗಳು ಬಾಕಿ ಇರುವಾಗಲೇ ರಾಮಲಲ್ಲಾನ ಮೂರ್ತಿಯ ಮೊದಲ ಚಿತ್ರ ಶುಕ್ರವಾರ ಬಹಿರಂಗಗೊಂಡಿದೆ.
ಕನ್ನಡಿಗ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಈ ಕೃಷ್ಣ ಶಿಲೆಯ ಮೂರ್ತಿಯ ಕಣ್ಣುಗಳನ್ನು ಹಳದಿ ಬಟ್ಟೆಯಿಂದ ಮುಚ್ಚಲಾಗಿದೆ. ಗುಲಾಬಿಯ ಸುಂದರ ಹಾರವನ್ನು ಮೂರ್ತಿಗೆ ಹಾಕಲಾಗಿದೆ. ಈ ಚಿತ್ರವನ್ನು ವಿಶ್ವ ಹಿಂದೂ ಪರಿಷತ್ ಶುಕ್ರವಾರ ಹಂಚಿಕೊಂಡಿದೆ.
51 ಇಂಚು ಎತ್ತರದ ರಾಮಲಲ್ಲಾನ ಮೂರ್ತಿಯನ್ನು ಗುರುವಾರ ಮಧ್ಯಾಹ್ನ ಗರ್ಭಗುಡಿಯೊಳಗೆ ತರಲಾಯಿತು. ಪ್ರಾಣ ಪ್ರತಿಷ್ಠಾಪನೆಗೆ ಸಿದ್ಧತೆಗಳನ್ನು ನಡೆಸಲಾಯಿತು. ವೇದಘೋಷಗಳ ಪಠಣ ಹಾಗೂ ಪೂಜಾ ಕೈಂಕರ್ಯಗಳು ಭರದಿಂದ ಸಾಗಿವೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಸದಸ್ಯ ಅನಿಲ್ ಮಿಶ್ರಾ ಅವರು ಪ್ರಧಾನ ಸಂಕಲ್ಪವನ್ನು ಮಾಡಲಿದ್ದಾರೆ ಎಂದು ಟ್ರಸ್ಟ್ ನ ಸದಸ್ಯ ದೀಕ್ಷಿತ್ ತಿಳಿಸಿದ್ದಾರೆ.
ಪ್ರಧಾನ ಸಂಕಲ್ಪ ಎಂಬ ಪರಿಕಲ್ಪನೆಯು ಭಗವಾನ್ ರಾಮನ ಮೂರ್ತಿ ಪ್ರತಿಷ್ಠಾಪನೆಯು ಸರ್ವರ ಕಲ್ಯಾಣ, ದೇಶದ ಏಳಿಗೆ, ಮನುಕುಲದ ಉದ್ಧಾರ ಹಾಗೂ ಮಂದಿರ ಆಗುವಲ್ಲಿ ಶ್ರಮವಹಿಸಿದ ಪ್ರತಿಯೊಬ್ಬರ ಪರವಾಗಿರಲಿದೆ. ಇದನ್ನು ಹೊರತುಪಡಿಸಿ ಇನ್ನಿತರ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಬ್ರಾಹ್ಮಣರಿಗೆ ವಸ್ತ್ರದಾನ ನಡೆಯಲಿದೆ. ಇನ್ನಿತರ ಕೆಲಸಗಳ ಹಂಚಿಕೆ ಆಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜ. 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳವಾರದಿಂದ ಸಾರ್ವಜನಿಕರಿಗೆ ದೇಗುಲ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದಿದ್ದಾರೆ.
ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಅವರು ಮಾಹಿತಿ ನೀಡಿ, ರಾಮಲಲ್ಲಾನ ಮೂರ್ತಿಯನ್ನು ಗರ್ಭಗುಡಿಯೊಳಗೆ ತರಲಾಗಿದೆ. ಕಾರ್ಯಕ್ರಮ ಸ್ಥಳದಲ್ಲಿ ಮೂಲಸೌಕರ್ಯ, ವೈದ್ಯಕೀಯ ವ್ಯವಸ್ಥೆ, ಔಷಧಗಳ ದಾಸ್ತಾನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಸಂಜಯ್ ಜೈನ್ ಪ್ರತಿಕ್ರಿಯಿಸಿ, ಅಯೋಧ್ಯೆಯ ರಾಮಮಂದಿರ ಸುತ್ತಮುತ್ತಲಿನ 16 ಸ್ಥಳಗಳಲ್ಲಿ ಪ್ರಥಮ ಚಿಕಿತ್ಸೆ ನೀಡುವ ತಂಡ ಇರಲಿದೆ. ಇದರಲ್ಲಿ ವೈದ್ಯರು, ಔಷಧ ತಜ್ಞರು ಮತ್ತು ಸಹಾಯಕರು ಇರಲಿದ್ದಾರೆ. ಪ್ರತಿ ಘಟಕವೂ ಆಮ್ಲಜನಕ ಸಹಿತ 10ರಿಂದ 20 ಹಾಸಿಗೆಗಳ ಸೌಕರ್ಯವನ್ನು ಹೊಂದಿವೆ. 40 ಆಂಬುಲೆನ್ಸ್ಗಳು ಸಜ್ಜಾಗಿರಲಿವೆ ಎಂದು ಮಾಹಿತಿ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.