ಮನೆ ಸುದ್ದಿ ಜಾಲ ಶಂಕರಾಚಾರ್ಯರ ವಿಚಾರಧಾರೆಗಳನ್ನು ಎಲ್ಲರೂ ಅಳವಡಿಸಿಕೊಳ್ಳಿ: ಶಾಸಕ ರಾಮದಾಸ್

ಶಂಕರಾಚಾರ್ಯರ ವಿಚಾರಧಾರೆಗಳನ್ನು ಎಲ್ಲರೂ ಅಳವಡಿಸಿಕೊಳ್ಳಿ: ಶಾಸಕ ರಾಮದಾಸ್

0

ಮೈಸೂರು(Mysuru)- ಶಂಕರಾಚಾರ್ಯರ ವಿಚಾರಧಾರೆಗಳನ್ನು ಎಲ್ಲರೂ ಕೂಡ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕರಾದ ಎಸ್.ಎ.ರಾಮದಾಸ್ (S.A.Ramdas) ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಶಂಕರಾಚಾರ್ಯ ಜಯಂತೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಇಂದು ಪೋರ್ಟ್ ಮೊಹಲ್ಲಾದಲ್ಲಿರುವ ಶೃಂಗೇರಿ ಶಂಕರ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಂಕರಾಚಾರ್ಯರು ಶಿವನ ಒಂದು ಅಂಗವಾದರೆ ಭಗವತ್ಪಾದರು ಶಂಕರನ ಅಂಶ ಎನ್ನಲು ಅವರವರ ಜೀವನದ ಒಂದೊಂದು ಘಟನೆಗಳನ್ನು ಅವಲಂಬಿಸಿರುತ್ತದೆ. ಶಂಕರನ ಭಗವತ್ಪಾದರ ವಿಚಾರಧಾರೆಯ ಜೊತೆಗೆ ಆ ಪುಟ್ಟ ಬಾಲಕ ಸಾಧನೆಗಳನ್ನು ನಮ್ಮ ಜೀವನದಲ್ಲಿ ಒಂದು ಅಂಶವಾಗಿ ರೂಢಿಸಿಕೊಳ್ಳಬೇಕು. ಶಂಕರಚಾರ್ಯರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಿಂದೂ ಧರ್ಮದ ಚಿಂತನೆಗಳನ್ನು ಪ್ರಚಾರ ಪಡಿಸಲು ಶ್ರಮಿಸಿದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷರಾದ ಹೆಚ್. ವಿ.ರಾಜೀವ್, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್ ಮಂಜುನಾಥಸ್ವಾಮಿ, ಡಾ.ಹೆಚ್.ಎಲ್ ಚಂದ್ರಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್.ಚೆನ್ನಪ್ಪ ಹಾಗೂ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.