ಬೆಂಗಳೂರು: ಬೆಂಗಳೂರಿನಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ಇಂದಿನಿಂದ (ಜ.20) ಬನಶಂಕರಿ ಅಮ್ಮನವರ 108ನೇ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಜನವರಿ 29ರ ವರೆಗೆ ನಡೆಯಲಿದೆ.
ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದಕ್ಕಾಗಿ ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ಪ್ರತಿ ದಿನ ಮುಂಜಾನೆ 5 ಗಂಟೆಗೆ ಅಮ್ಮನವರಿಗೆ ಸುಪ್ರಭಾತ ಸೇವೆ, ವಿಶೇಷ ಪಂಚಾಮೃತ ಅಭಿಷೇಕ ನಡೆಯುತ್ತದೆ.
ಜಾತ್ರಾಮಹೋತ್ಸವದ ವಿವರ
ಜ.21ರಂದು ಶ್ರೀ ಲಕ್ಷ್ಮೀನಾರಾಯಣ ಹೃದಯ ಹೋಮ, ಶ್ರೀ ಧನ್ವಂತರಿ ಹೋಮ ಆಯೋಜಿಸಲಾಗಿದೆ.
ಜ.22ರಂದು ರುದ್ರಹೋಮ, ಸಂಜೆ 5 ಗಂಟೆಗೆ ಶ್ರೀ ಪರ್ವತ ಮಲ್ಲಿಕಾರ್ಜುನ ಸ್ವಾಮಿಗೆ ಬಿಲ್ವಾರ್ಚನೆ ನಡೆಯುತ್ತದೆ.
ಜ.23ರಂದು ಶ್ರೀ ದುರ್ಗಾ ಹೋಮ, ಶ್ರೀ ಸೂಕ್ತ ಹೋಮ, ಶ್ರೀ ಸಾರಸ್ವತ ಹೋಮ ನೆರವೇರುತ್ತದೆ.
ಜ.24ರಂದು ನವಚಂಡಿಕಾ ಹೋಮ, ಮೂಲ ದೇವರ ಸನ್ನಿಧಿಯಲ್ಲಿ ವಿಶೇಷ ಪಲ್ಯದ ಪೂಜೆ ನಡೆಯುತ್ತದೆ.
ಜ.25ರಂದು ಬನದ ಹುಣ್ಣಿಮೆ ಅಂಗವಾಗಿ ಬೆಳಗ್ಗೆ 11.50 ರಿಂದ 12.50ರವರೆಗೆ ರಥಾರೋಹಣ ಜರಗುತ್ತದೆ. ಅಂದು ಸಂಜೆ 6ಕ್ಕೆ ಶಾಕಾಂಬರಿ ದೇವಿಯವರಿಗೆ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದ್ದು ಭಕ್ತಾಧಿಗಳು ಪಾಲ್ಗೊಳ್ಳಲು ಆಡಳಿತ ಮಂಡಳಿಯಿಂದ ಮನವಿ ಮಾಡಿದೆ.
ಇನ್ನು ಇಂದು (ಶನಿವಾರ) ಬನಶಂಕರಿ ಅಮ್ಮನವರಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಅಮ್ಮನವರ ದರ್ಶನಕ್ಕೆ ಭಕ್ತಸಾಗರ ಹರಿದುಬರುತ್ತಿದೆ. ಇಂದು ಬೆಳಿಗ್ಗೆ ಅಮ್ಮನವರಿಗೆ ಪಂಚಾಭಿಷೇಕ ಮಾಡಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.