ಮನೆ ರಾಜಕೀಯ ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ: ಬಸವರಾಜ ಬೊಮ್ಮಾಯಿ ವಾಗ್ದಾಳಿ

ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ: ಬಸವರಾಜ ಬೊಮ್ಮಾಯಿ ವಾಗ್ದಾಳಿ

0

ಹಾವೇರಿ: ಜಿಲ್ಲೆಯ ಹಾನಗಲ್ ​​ನಲ್ಲಿ ಮಹಿಳೆ ಮೇಲೆ ಗ್ಯಾಂಗ್​ ರೇಪ್​ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ. ನೈತಿಕ ಪೊಲೀಸ್ ​ಗಿರಿ ಪ್ರಕರಣಗಳೂ ಬಹಿರಂಗವಾಗಿವೆ. ಇಂತಹ ಕೃತ್ಯ ಎಸಗುವ ಗ್ಯಾಂಗ್​​ ಸಕ್ರಿಯವಾಗಿದೆ. ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ  ಅವರು ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಅವರು, ಕೃತ್ಯಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಪ್ರಕರಣವನ್ನು SIT ತನಿಖೆಗೆ ಕೊಡಿ ಅಂದ್ರೂ ಸರ್ಕಾರ ನೀಡ್ತಿಲ್ಲ ಎಂದು ಆರೋಪಿಸಿದರು.

ಆಡಳಿತ ವ್ಯವಸ್ಥೆ, ಸರ್ಕಾರ ರೇಪಿಸ್ಟ್​ಗ ಳ ಜೊತೆ ನಿಂತಿದೆ. ಪೋಕ್ಸೋ ಕೇಸ್​ ನಲ್ಲಿ ಕೇಸ್ ದಾಖಲು ಮಾಡಿಲ್ಲ. ಸುಳ್ಳು ಮೆಡಿಕಲ್ ಎಕ್ಸಾಮಿನ್ ಆಗಿವೆ. ಇದು ಮೆಡಿಕೋ ಲೀಗಲ್ ಕೇಸ್, ಸರ್ಕಾರ ಸಂತ್ರಸ್ತೆ ಬಗ್ಗೆ ಜವಾಬ್ದಾರಿ ತಗೊಬೇಕು. ಸಿಎಂ ಶಾಸಕರಿಗೆ ಹೇಳಿದ್ದೀನಿ ಅಂತಾರೆ. ಅಂದ್ರೆ ಸರ್ಕಾರ ಸತ್ತಿದೆಯಾ? ಆರೋಗ್ಯ ಇಲಾಖೆ ಸತ್ತಿದೆಯಾ ಎಂದ ಬಸವರಾಜ್ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ.

ಇನ್ನು ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕ್ರಿಮಿನಲ್‌ ಗಳಿಗೆ ಕುಮಕ್ಕು ಸಿಗುತ್ತಿದೆ. ಅಪರಾಧ ಕೃತ್ಯ ಎಸಗಿದವರಲ್ಲಿ ವೋಟ್ ಬ್ಯಾಂಕ್ ಇದೆ. ಹೀಗಾಗಿ ಅವರ ರಕ್ಷಣೆ ಮಾಡುವ ಕೆಲಸವನ್ನ ಸರ್ಕಾರ ಮಾಡುತ್ತಿದೆ. ಹಾನಗಲ್‌ ನಲ್ಲಿ ಗ್ಯಾಂಗ್ ರೇಪ್ ಪ್ರಕರಣವನ್ನ ಖಂಡಿಸಿ ನಾವು ಇವತ್ತು ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.

 ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಆದ್ರೂ ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಅಂತಾರೆ. ಹಾಗಾದ್ರೆ ಇಬ್ಬರೂ ‌ಪೊಲೀಸರನ್ನ ಅಮಾನತು ಮಾಡಿದ್ದು ಏಕೆ? ಆ ಹೆಣ್ಣು ಮಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡಿಸಲು ಇವರಿಂದ ಆಗಿಲ್ಲ. ಇಂತಹ ಘಟನೆಯಾದಾಗ ಸರ್ಕಾರವೇ ಸಂತ್ರಸ್ತರಿಗೆ ಚಿಕಿತ್ಸೆ ಕೊಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ಪ್ರಕರಣವನ್ನ ಎಸ್‌ ಐಟಿಗೆ ತನಿಖೆಗೆ ಕೊಡಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಆರ್.ಅಶೋಕ ಅವರು ಸಹ ಈ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಾರೆ. ಹೋರಾಟಕ್ಕೆ ಸರ್ಕಾರ ಬಗ್ಗದೆ ಹೋದ್ರೆ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರದಲ್ಲಿ ನಿರ್ಭಯವಾಗಿ ಕ್ರಿಮಿನಲ್​ಗಳು ಓಡಾಡುತ್ತಿದ್ದಾರೆ. ಪೊಲೀಸರೇ ಒಸಿ, ಇಸ್ಪೀಟ್ ಅಡ್ಡೆಗಳನ್ನ ಮಾಡಿಸುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಪೊಸ್ಟಿಂಗ್ ನಲ್ಲಿ ಹಣ ಕೊಟ್ಟಿರೋದು. ಅಲ್ಪ ಸಂಖ್ಯಾತರಿಗೂ ನ್ಯಾಯ ಕೊಟ್ಟಿಲ್ಲ, ದಲಿತರಿಗೂ ನ್ಯಾಯ ಕೊಟ್ಟಿಲ್ಲ. ಕ್ರಿಮಿನಲ್ ಗಳಿಗೆ ಸರ್ಕಾರ ರಕ್ಷಣೆ ಕೊಡ್ತಿದೆ ಎಂದು ಬಸವರಾಜ ಬೊಮ್ಮಾಯಿಯವರು ವಾಗ್ದಾಳಿ ನಡೆಸಿದ್ದಾರೆ.