ಮನೆ ರಾಜ್ಯ ಕಲ್ಲಡ್ಕ ಪ್ರಭಾಕರ್ ಭಟ್ಟರಿಗೆ ಜಾಮೀನು ಕೊಡಿಸಿದ್ದಕ್ಕೆ ಕಾಂಗ್ರೆಸ್ ನಿಂದ ಉಚ್ಛಾಟನೆಗೊಂಡ ವಕೀಲರಿಗೆ ಸನ್ಮಾನ

ಕಲ್ಲಡ್ಕ ಪ್ರಭಾಕರ್ ಭಟ್ಟರಿಗೆ ಜಾಮೀನು ಕೊಡಿಸಿದ್ದಕ್ಕೆ ಕಾಂಗ್ರೆಸ್ ನಿಂದ ಉಚ್ಛಾಟನೆಗೊಂಡ ವಕೀಲರಿಗೆ ಸನ್ಮಾನ

0

ಮಂಡ್ಯ: ಕಲ್ಲಡ್ಕ ಪ್ರಭಾಕರ ಭಟ್ಟರವರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಕಾಲತ್ತನ್ನು ವಹಿಸಿಕೊಂಡು ಜಾಮೀನು ಮಂಜೂರು ಮಾಡಿಸಿದ ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಅಧ್ಯಕ್ಷ ಹಾಗೂ ವಕೀಲರಾದ ಡಿ .ವಿ ಚಂದ್ರೇಗೌಡರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಈ ಹಿನ್ನಲೆ ಶ್ರೀರಂಗಪಟ್ಟಣ ತಾಲೂಕಿನ ಬಿಜೆಪಿ ಪಕ್ಷದ ಮುಖಂಡ ಇಂಡುವಳು ಸಚ್ಚಿದಾನಂದ, ವಕೀಲರ ಪರ ನಿಂತು, ಸನ್ಮಾನಿಸಿ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿದರು.

ಈ ವೇಳೆ ಮಾಜಿ ಪುರಸಭೆ ಉಪಾಧ್ಯಕ್ಷ ಪ್ರಕಾಶ್ ಮಾತನಾಡಿ, 35 ವರ್ಷದ ಹಿಂದೆ ಅಯೋಧ್ಯೆಗೆ ಸಂಬಂಧಪಟ್ಟ ಯಾವುದೋ ಒಂದು ಪ್ರಕರಣದಲ್ಲಿ ಕರವೇ ಕಾರ್ಯಕರ್ತರ ಬಂಧನ ಹಾಗೂ ಕೃಷ್ಣರಾಜಸಾಗರಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಿ ಎಂದು ಕಾಂಗ್ರೆಸ್ ಪಕ್ಷದವರು ಹೇಳುವ ಮುಖಾಂತರ ಹಿಂದೂ ವಿರೋಧಿಗಳಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಚಾಲಕರಾದ ಚಂದನ್,ಸುಧಾ, ವಕೀಲರಾದ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.