ನಂಜನಗೂಡು: ಹಾಲು ಉತ್ಪಾದಕರಿಗೆ ನೀಡಬೇಕಾದ ಹಣ ಪಾವತಿಸುವಂತೆ ಬುದ್ದಿವಾದ ಹೇಳಿದ ಉಪಾಧ್ಯಕ್ಷನ ಮೇಲೆ ಕಾರ್ಯದರ್ಶಿ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಇಬ್ಜಾಲ ಗ್ರಾಮದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಉಪಾಧ್ಯಕ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇಬ್ಜಾಲ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶಿವು ಹಲ್ಲೆ ನಡೆಸಿದ ಆರೋಪಿ. ಹಲ್ಲೆಗೊಳಗಾದ ಮಹದೇವನಾಯಕ ಮೃತಪಟ್ಟ ಉಪಾಧ್ಯಕ್ಷ. ಶಿವು ಹಾಲು ಉತ್ಪಾದಕರಿಗೆ ಹಣ ನೀಡದೆ ಸತಾಯಿಸುತ್ತಿದ್ದ. ಈ ವಿಚಾರವಾಗಿ ಹಾಲು ಉತ್ಪಾದಕರು ಉಪಾಧ್ಯಕ್ಷ ಮಹದೇವನಾಯಕ ರವರ ಗಮನಕ್ಕೆ ತಂದಿದ್ದರು. ಈ ವಿಚಾರವಾಗಿ ಬುದ್ದಿ ಹೇಳಲು ಸಂಘಕ್ಕೆ ತೆರಳಿದ ವೇಳೆ ಶಿವು ತಾಯಿ ರವಿಯಮ್ಮ ಉಡಾಫೆಯಿಂದ ಮಾತನಾಡಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಅಲ್ಲಿಗೆ ಬಂದ ಕಾರ್ಯದರ್ಶಿ ಶಿವು ಏಕಾ ಏಕಿ ಕಪಾಳಕ್ಕೆ ಹೊಡೆದು ನೆಲದ ಮೇಲೆ ಹಾಕಿ ಹಲ್ಲೆ ನಡೆಸಿದ್ದಾನೆ. ತೀವ್ರ ಹಲ್ಲೆಗೆ ಒಳಗಾದ ಮಹದೇವನಾಯಕನನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬಂದ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಶಿವು ಹಾಗೂ ರವಿಯಮ್ಮ ಮೇಲೆ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.