ಮನೆ ಕಾನೂನು ಲಂಚ ಸ್ವೀಕರಿಸುತ್ತಿದ್ದ ಜೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಜೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ

0

ರಾಯಚೂರು: ಲಂಚ ಸ್ವೀಕರಿಸುತ್ತಿದ್ದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ‌ಇಂಜಿನಿಯರ್‌ರನ್ನು (ಎಇಇ) ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಲಿಂಗಸೂಗೂರು ಪಟ್ಟಣದ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಂಚಪ್ಪ ಬಾವಿಮನಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.

ಆಶಿಹಾಳ ತಾಂಡದ ನಿವಾಸಿಯಾದ ವಿದ್ಯುತ್ ಗುತ್ತಿಗೆದಾರರ ಪ್ರೇಮಕುಮಾರ್​ ಎಂಬವರು ತಾವು ವಿದ್ಯುದ್ದೀಕರಣಗೊಳಿಸಿದ ಮನೆಯ ಆರ್‌ಆರ್‌ ನಂಬರ್ ನೀಡುವಂತೆ ಎಇಇ ಕೆಂಚಪ್ಪ ಬಾವಿಮನಿ ಅವರಿಗೆ ಮನವಿ ಮಾಡಿದ್ದರು.

ಇದಕ್ಕಾಗಿ ಕೆಂಚಪ್ಪ ಕೆಲವು ದಿನಗಳಿಂದಲೂ ಪ್ರೇಮಕುಮಾರ್​ ಅವರನ್ನು ಅಲೆದಾಡಿಸಿದ್ದರು. ಬಳಿಕ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂಜಿನಿಯರ್ ನಡೆಗೆ ಬೇಸತ್ತ ಪ್ರೇಮಕುಮಾರ್​ ಲೋಕಾಯುಕ್ತರಿಗೆ ದೂರು ನೀಡಿದ್ದರು.

ಲೋಕಾಯುಕ್ತ ಎಸ್ಪಿ ಎಂ.ಎನ್.ಶಶಿಧರ್ ಮಾರ್ಗದರ್ಶನದಲ್ಲಿ ಡಿಎಸ್ಪಿ ಸಿದ್ದೇಶ್ವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಎಇಇ ಕೆಂಚಪ್ಪ ಬಾವಿಮನಿ ಅನಾರೋಗ್ಯವೆಂದು ತಿಳಿಸಿದ್ದು, ಅಧಿಕಾರಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.