ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಪಡಿತರ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಹಜಹಾನ್ ಶೇಖ್ ಅವರ ಮನೆಗೆ ಜಾರಿ ನಿರ್ದೇಶನಾಲಯ (ಇಡಿ) ತಂಡ ಮತ್ತೊಮ್ಮೆ ದಾಳಿ ನಡೆಸಿದೆ.
ಈ ಹಿಂದೆ ಜನವರಿ 5 ರಂದು ಇಡಿ ತಂಡವು ಶಹಜಹಾನ್ ಶೇಖ್ ಅವರ ಮನೆಯ ಮೇಲೆ ದಾಳಿ ನಡೆಸಿದ ಸಂದರ್ಭ ಶಹಜಹಾನ್ ಶೇಖ್ ಅವರ ಆಪ್ತರು ಸೇರಿ ಗುಂಪು ದಾಳಿ ನಡೆಸಿದ್ದರು. ಅದಕ್ಕಾಗಿ ಇದೀಗ ಸ್ಥಳೀಯ ಪೋಲೀಸರ ಜೊತೆ ಕೇಂದ್ರ ಭದ್ರತಾ ಪಡೆ ಸಿಬ್ಬಂದಿಗಳು ಸೇರಿದಂತೆ ಒಟ್ಟು ಇಪ್ಪತ್ತನಾಲ್ಕು ವಾಹನಗಳಲ್ಲಿ ಬಂದ ಅಧಿಕಾರಿಗಳು ನಿವಾಸಕ್ಕೆ ದಾಳಿ ನಡೆಸಿ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.
ಜನವರಿ 5 ರಂದು, ಇಡಿ ತಂಡವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಹಜಹಾನ್ ಶೇಖ್ ಅವರ ನಿವಾಸ ತಲುಪುತ್ತಿದ್ದಂತೆ ಶೇಖ್ ಬೆಂಬಲಿಗರು ಇಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದರು. ಈ ದಾಳಿಯಲ್ಲಿ ಇಡಿ ಜೊತೆಗೆ ಕೇಂದ್ರ ಭದ್ರತಾ ಪಡೆಗಳ ವಾಹನಗಳನ್ನೂ ಧ್ವಂಸಗೊಳಿಸಲಾಗಿತ್ತು. ಅಲ್ಲದೆ ಈ ವೇಳೆ 3 ಅಧಿಕಾರಿಗಳು ಗಾಯಗೊಂಡಿದ್ದರು.
ಷಹಜಹಾನ್ ಶೇಖ್ ಅಥವಾ ಎಸ್ಕೆ ಷಹಜಹಾನ್ ಅವರು ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿ ಪ್ರದೇಶದ ಅತ್ಯಂತ ಪ್ರಭಾವಿ ಟಿಎಂಸಿ ನಾಯಕರಾಗಿದ್ದಾರೆ. ಅವರು ಉತ್ತರ 24 ಪರಗಣ ಜಿಲ್ಲಾ ಕೌನ್ಸಿಲ್ನ ಸದಸ್ಯರೂ ಆಗಿದ್ದಾರೆ. ಪಶ್ಚಿಮ ಬಂಗಾಳದ ಎಡಪಂಥೀಯ ಸರ್ಕಾರದ ಅವಧಿಯಲ್ಲಿ ಶೇಖ್ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಷಹಜಹಾನ್ ಶೇಖ್ ಆರಂಭದಲ್ಲಿ ಸಿಪಿಐಎಂನಲ್ಲಿದ್ದರು. ಇದರ ನಂತರ, ಅವರು 2009-2010 ರ ಸುಮಾರಿಗೆ ಟಿಎಂಸಿ ನಾಯಕ ಜ್ಯೋತಿಪ್ರಿಯೊ ಮಲ್ಲಿಕ್ ಅವರ ಸಹಾಯದಿಂದ ತೃಣಮೂಲ ಕಾಂಗ್ರೆಸ್ ಗೆ ಸೇರಿದರು. ಶೇಖ್ ಹಲವಾರು ಬಾರಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿ ಸ್ಥಳೀಯ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ಶಹಜಹಾನ್ ಶೇಖ್ ಸ್ಥಳೀಯ ಪ್ರದೇಶದಲ್ಲಿ ಕುಖ್ಯಾತಿ ಪಡೆದಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಈತ ಕೊಲೆ ಪ್ರಕರಣದಲ್ಲಿ ಎಫ್ಐಆರ್ ನಲ್ಲಿ ಆರೋಪಿಯಾಗಿದ್ದ. ಆದರೆ, ಬಂಗಾಳ ಪೊಲೀಸರು ಶೇಖ್ಗೆ ಸಂಪೂರ್ಣ ಕ್ಲೀನ್ ಚಿಟ್ ನೀಡಿದ್ದಾರೆ. ಕೊಲೆ ಪ್ರಕರಣದ ಅಂತಿಮ ಆರೋಪ ಪಟ್ಟಿಯಿಂದ ಶೇಖ್ ಹೆಸರನ್ನು ತೆಗೆದುಹಾಕಲಾಗಿದೆ. 2021 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಟಿಎಂಸಿ ನಾಯಕನ ವಿರುದ್ಧ ರಾಜಕೀಯ ಹಿಂಸಾಚಾರ ಮತ್ತು ಅಭ್ಯರ್ಥಿಗಳು ಮತ್ತು ವಿರೋಧ ಪಕ್ಷಗಳ ಮತದಾರರಿಗೆ ಬೆದರಿಕೆಯ ಆರೋಪಗಳಿವೆ. ಶೇಖ್ 2022 ರಲ್ಲಿ ಕಳೆದ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದರು ಮತ್ತು ಉತ್ತರ 24 ಪರಗಣ ಜಿಲ್ಲೆಯ ಜಿಲ್ಲಾ ಪರಿಷತ್ ಸದಸ್ಯರಾಗಿ 34,000 ಕ್ಕೂ ಹೆಚ್ಚು ಮತಗಳಿಂದ ಆಯ್ಕೆಯಾದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.