ಬೆಂಗಳೂರು: ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿದ ಕಾನ್ ಸ್ಟೇಬಲ್ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿರುವುದಾಗಿ ಆರೋಪಿಸಿ ಸಂತ್ರಸ್ತೆ ನ್ಯಾಯಕ್ಕಾಗಿ ಬಸವನಗುಡಿ ಠಾಣೆಯ ಪ್ರತಿಭಟನೆ ನಡೆಸುತ್ತಿದ್ದಾಳೆ.
ಬಸವನಗುಡಿ ಠಾಣೆಯ ಪೊಲೀಸ್ ಪೇದೆ ಅನಿಲ್ ಕುಮಾರ್ ಎಂಬಾತ ವಂಚಿಸಿರುವುದಾಗಿ ಚಿತ್ರದುರ್ಗ ಜಿಲ್ಲೆಯ, ಉತ್ತರಹಳ್ಳಿಯ ನಿವಾಸಿ ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.
ಅನಿಲ್ ಕುಮಾರ್ ಹಾಗೂ ಪ್ರತಿಭಟನೆ ನಡೆಸುತ್ತಿರುವ ಯುವತಿಯು ನಾಲ್ಕು ವರ್ಷದಿಂದ ಪ್ರೀತಿಸುತ್ತಿದ್ದರು. ಮದುವೆ ಆಗುವುದಾಗಿ ಅನಿಲ್ ಹೇಳಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಸಿರ್ಸಿ ಸರ್ಕಲ್ ಬಳಿಯ ಪೊಲೀಸ್ ಕ್ವಾಟ್ರಸ್ ಗೆ ಕರೆದೊಯ್ದ ಬಲತ್ಕಾರ ಮಾಡಿದ್ದಾನೆ. ಮದುವೆಯಾಗುವಂತೆ ಕೇಳಿದ್ದರೆ ಇದೀಗ ನಿರಾಕರಿಸುತ್ತಿದ್ದಾನೆ. ಇದೀಗ ಇನ್ನೊಬ್ಬರ ಜತೆ ಮದುವೆಗೆ ತಯಾರಿ ನಡೆಸಿದ್ದಾನೆ. ಇದನ್ನು ಪ್ರಶ್ನಿಸಲು ಹೋದರೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. 2023ರ ಆಗಸ್ಟ್ ನಲ್ಲಿ ನಾಗವೇಣಿ ಪೊಲೀಸರಿಗೆ ದೂರು ನೀಡಿದ್ದಳು. ಆದರೆ, ಅನಿಲ್ ಈ ಪ್ರಕಣದಲ್ಲಿ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ.
ಇದೀಗ ಏನು ಮಾಡಬೇಕೆಂದು ತೋಚದೇ ಯುವತಿಯು ಬಸವನಗುಡಿ ಠಾಣೆಯ ಮುಂದೆ ಒಂಟಿಯಾಗಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾಳೆ. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಅನಿಲ್ ಕರ್ತವ್ಯದಲ್ಲಿ ಇದ್ದಾಗಲೇ ಯುವತಿ ಬಂದು ಠಾಣೆ ಮುಂದೆ ಕುಳಿತುಕೊಂಡಿದ್ದಾಳೆ. ನ್ಯಾಯ ಸಿಗುವವರೆಗೂ ನಾನು ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ.
ಸಂತ್ರಸ್ತೆ ಬರುತ್ತಿದ್ದಂತೆ ಅನಿಲ್ ಕುಮಾರ್ ಪರಾರಿಯಾಗಿದ್ದಾನೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.