ಬಂಡೀಪುರ : ಬಂಡಿಪುರ ಅರಣ್ಯ ಪ್ರದೇಶದೊಳಗಿನ ರಸ್ತೆಯ ಮೂಲಕ ಕೇರಳದ ವೈನಾಡಿಗೆ ಹೋಗುವ ಮಾರ್ಗದಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ಸಂಚಾರ ನಿರ್ಬಂಧಿಸಿರುವ ಕುರಿತಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಖುದ್ದು ಪರಿಶೀಲನೆ ನಡೆಸಿದರು.
23ರ ಮಧ್ಯರಾತ್ರಿ 12 ಗಂಟೆಯಿಂದ 24ರ ನಸುಕಿನ 2 ಗಂಟೆಯವರೆಗೆ ಈ ಮಾರ್ಗವಾಗಿ ಕೇರಳದ ಗಡಿಯವರೆಗೂ ಅಧಿಕಾರಿಗಳೊಂದಿಗೆ ಪ್ರಯಾಣ ಮಾಡಿದ ಸಚಿವರು, ರಸ್ತೆಯನ್ನು ದಾಟುವ ಜಿಂಕೆಗಳು, ಆನೆಗಳನ್ನು ವೀಕ್ಷಿಸಿ, ಕರ್ನಾಟಕದ ಗಡಿಯೊಳಗಿನ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸಿದರು.
ನಿತ್ಯ ಎಷ್ಟು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ, ರಾತ್ರಿಯ ವೇಳೆ ವಾಹನ ಸಂಚಾರದಿಂದ ಎಷ್ಟು ವನ್ಯಜೀವಿಗಳು ಮೃತಪಟ್ಟಿವೆ ಎಂಬ ಬಗ್ಗೆಯೂ ಮಾಹಿತಿ ಪಡೆದರು. ಈ ಮಾರ್ಗದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂಬ ಕೇರಳದ ಬೇಡಿಕೆಯ ಕುರಿತಂತೆಯೂ ಅಧಿಕಾರಿಗಳ ಜೊತೆ ಸಮಾಲೋಚಿಸಿದರು.
ಚೆಕ್ ಪೋಸ್ಟ್ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದ ಸಚಿವರು, ಕುಂದುಕೊರತೆಯನ್ನೂ ಆಲಿಸಿದರು. ಚೆಕ್ ಪೋಸ್ಟ್ ಸಿಬ್ಬಂದಿಗೆ ನೀಡಿರುವ ಸೌಲಭ್ಯಗಳ ಪರಿಶೀಲನೆ ನಡೆಸಿದರು.
ರಾತ್ರಿ 9ರ ನಂತರ ಆಂಬುಲೆನ್ಸ್ ಗಳಿಗೆ ಮತ್ತು ಕರ್ನಾಟಕದ 5 ಹಾಗೂ ಕೇರಳದ 5 ಬಸ್ ಗಳ ಸಂಚಾರಕ್ಕೆ ಮಾತ್ರವೇ ಅವಕಾಶ ನೀಡಲಾಗಿದ್ದು, ಉಳಿದಂತೆ ತೀರಾ ತುರ್ತು ಸನ್ನಿವೇಶದಲ್ಲಿ ಪ್ರಯಾಣಿಕರ ವಾಹನಗಳ ಪ್ರಯಾಣಿಕರ ವಿವರ ಪಡೆದು ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಲಾಯಿತು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.