ಮನೆ ಸ್ಥಳೀಯ ಹನುಮ ಧ್ವಜ ತೆರವು ವಿವಾದ: ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಹನುಮ ಧ್ವಜ ತೆರವು ವಿವಾದ: ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

0

ಮೈಸೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿತು.

ಮೈಸೂರಿನ ಗಾಂಧಿ ವೃತ್ತದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಬಿಜೆಪಿ ಅಧ್ಯಕ್ಷ ಎಲ್. ಆರ್. ಮಹದೇವಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಭಾಗಿಯಾದರು.