ಮೈಸೂರು-ಕೊಡುಗಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಯಾವುದೇ ಮಾಧ್ಯಮ ಗೋಷ್ಠಿ ನಡೆಸಬಾರದು ಮತ್ತು ಅವರ ವಿರುದ್ಧ ಯಾವುದೇ ಮಾನಹಾನಿಕಾರಕ ಮಾಹಿತಿಯನ್ನು ಹಂಚಿಕೊಳ್ಳದಂತೆ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಈಚೆಗೆ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.
ಪ್ರತಾಪ್ ಸಿಂಹ ಅವರು ದಾಖಲಿಸಿರುವ ಮೂಲ ದಾವೆಯ ವಿಚಾರಣೆಯನ್ನು 9ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎ ಹರೀಶ ಅವರು ನಡೆಸಿದರು.
“ಫಿರ್ಯಾದಿ ಪ್ರತಾಪ್ ಸಿಂಹ ವಿರುದ್ಧ ಲಕ್ಷ್ಮಣ್ ಅವರು ಯಾವುದೇ ತೆರನಾದ ಮಾಧ್ಯಮ ಗೋಷ್ಠಿ ನಡೆಸಬಾರದು. ಆಡಿಯೊ ವಿಧಾನದಲ್ಲಿ, ಮುದ್ರಣ ಮಾಧ್ಯಮವಾದ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮ, ಸ್ಥಳೀಯ ಕೇಬಲ್ ಆಪರೇಟರ್, ಇಂಟರ್ನೆಟ್, ವೆಬ್ಸೈಟ್, ರೇಡಿಯೊ ಚಾನೆಲ್, ಸಾಮಾಜಿಕ ಮಾಧ್ಯಮ ಇತ್ಯಾದಿಗಳಲ್ಲಿ ಸುಳ್ಳು, ದುರುದ್ದೇಶಪೂರಿತ, ಮಾನಹಾನಿಯಾಗುವ ಮಾಹಿತಿಯನ್ನು ಪ್ರತಾಪ್ ಸಿಂಹ ಅವರ ವಿರುದ್ಧ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಮುಂದಿನ ವಿಚಾರಣೆಯವರೆಗೆ ಹಂಚಿಕೊಳ್ಳಬಾರದು. ಲಕ್ಷ್ಮಣ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದ್ದು, ವಿಚಾರಣೆಯನ್ನು ಫೆಬ್ರವರಿ 13ಕ್ಕೆ ಮುಂದೂಡಿದೆ.
ಪ್ರತಾಪ್ ಸಿಂಹ ಅವರ ಪರವಾಗಿ ವಕೀಲ ಎಂ ಸುದರ್ಶನ್ ಸುರೇಶ್ ಅವರು ವಕಾಲತ್ತು ಹಾಕಿದ್ದಾರೆ.
ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಮೈಸೂರಿನಲ್ಲಿ ಮಾಧ್ಯಮ ಗೋಷ್ಠಿ ನಡೆಸುವ ಮೂಲಕ ಪ್ರತಾಪ್ ಸಿಂಹ ಅವರ ವಿರುದ್ಧ ಮೇಲಿಂದ ಮೇಲೆ ಮೊನಚಿನ ದಾಳಿ ನಡೆಸುತ್ತಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.