ಮನೆ ಅಪರಾಧ ಬೈಕ್ ಟ್ರ್ಯಾಕ್ಟರ್ ಡಿಕ್ಕಿ: ಸವಾರ ಸಾವು, ಹಿಂಬದಿ ಸವಾರ ಗಂಭೀರ

ಬೈಕ್ ಟ್ರ್ಯಾಕ್ಟರ್ ಡಿಕ್ಕಿ: ಸವಾರ ಸಾವು, ಹಿಂಬದಿ ಸವಾರ ಗಂಭೀರ

0

ಶ್ರೀರಂಗಪಟ್ಟಣ: ಟ್ರ್ಯಾಕ್ಟರ್ ಗೆ ಬೈಕು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟು ಹಿಂಬದಿ ಸವಾರ ಗಂಬೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಶ್ರೀರಂಗಪಟ್ಟಣ -ಕೆಆರ್‌ಎಸ್ ರಸ್ತೆಯ ಪಾಲಹಳ್ಳಿ ಗ್ರಾಮದ ಬಳಿ ನಡೆದಿದೆ.


ತಾಲೂಕಿನ ಹುಲಿಕೆರೆ ಗ್ರಾಮದ ಮಹದೇವು ಅವರ ಪುತ್ರ ಕೌಶಿಕ್ (೧೮) ಮೃತಪಟ್ಟ ಯುವಕ.ಈತನ ಸಹೋದರ ಪವನ್ (೧೩) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ಕೌಶಿಕ್ ಮೈಸೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಈತನ ಸಹೋದರ ಬೆಳಗೊಳ ಸರ್ಕಾರಿ ಪ್ರೌಡಶಾಲೆಯಲ್ಲಿ ೮ನೇ ತರಗತಿ ಓದುತ್ತಿದ್ದು ಶಾಲೆಯಿಂದ ಕರ್ನಾಟಕ ದರ್ಶನಕ್ಕೆ ಪ್ರವಾಸ ಹೋಗಲು ಗುರುವಾರ ಬೆಳಿಗ್ಗೆ ನಿಗಧಿಯಾಗಿತ್ತು. ಸಹೋದರ ಪವನ್ ನನ್ನು ಶ್ರೀರಂಗಪಟ್ಟಣ ಬಿಇಒ ಕಚೇರಿ ಬಳಿ ಪ್ರವಾಸಿ ವಾಹನ ಇರುವ ಹಿನ್ನೆಲೆ ಗ್ರಾಮದಿಂದ ಬೈಕಿನಲ್ಲಿ ಕರೆದುಕೊಂಡು ಬರುವಾಗ ಟ್ರಾಕ್ಟರ್ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸ್ಥಳದಲ್ಲಿ ಮೃತಯುವಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಶ್ರೀರಂಗಪಟ್ಟಣ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತ ಯುವಕನನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿ, ಗಂಭೀರವಾಗಿ ಗಾಯಗೊಮಡ ಮೃತನ ಸಹೋದರರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಪ್ರಕರಣ ಠಾಣೆಯಲ್ಲಿ ದಾಖಲಿಸಿಕೊಂಡಿದ್ದಾರೆ.