ಬೆಂಗಳೂರು: ಬಿಜೆಪಿ ನಾಯಕರಲ್ಲಿ ಅದ್ಯಾವ ನೈತಿಕತೆ ಉಳಿದಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಾರೆ ಅಂತ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಬರ ಪರಿಹಾರ ಧನವನ್ನು ರೈತರಿಗೆ ಇನ್ನೂ ನೀಡಿಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ ಅಂತ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಧರಣಿ ನಡೆಸುವುದಾಗಿ ಹೇಳಿದ್ದಾರೆ ಅಂತ ಮಾಧ್ಯಮ ಪ್ರತಿನಿಧಿಗಳು ತಿಳಿಸಿದಾಗ ಪರಮೇಶ್ವರ್ ಹಾಗೆ ಪ್ರತಿಕ್ರಿಯಿಸಿದರು. ಬರ ಪರಿಹಾರ ಪರಿಹಾರ ನಿಧಿ ಕೇಂದ್ರದಿಂದ ಇದುವರೆಗೆ ಬಿಡುಗಡೆಯಾಗಿಲ್ಲ, ರಾಜ್ಯದ 27 ಸಂಸತ್ ಸದಸ್ಯರು ಪ್ರಧಾನಿಯವರಿಗಾಗಲೀ, ಗೃಹ ಸಚಿವರಿಗಾಗಲೀ ಯಾಕೆ ಮನವಿ ಮಾಡುತ್ತಿಲ್ಲ? ಎಂದು ಪರಮೇಶ್ವರ್ ಕೇಳಿದರು.
ನ್ಯಾಯಸಮ್ಮತವಾಗಿ ರಾಜ್ಯಕ್ಕೆ ಸಲ್ಲಬೇಕಾದ ಬರಪರಿಹಾರ ನಿಧಿ ಬಿಡುಗಡೆ ಮಾಡಲಿ ಅಂತ ಕೇಳಲಿ. ಅದನ್ನು ಮಾಡೋದು ಬಿಟ್ಟು ಇಲ್ಲಿ ಪ್ರತಿಭಟನೆ ನಡೆಸಿದರೆ ಅದಕ್ಕೇನು ಅರ್ಥ? ಎಂದು ಗೃಹ ಸಚಿವ ಅಸಹನೆಯಿಂದ ಕೇಳಿದರು.
ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದೆ. ತಲಾ ರೂ. 2,000 ಯಂತೆ ರೈತರ ಬ್ಯಾಂಕ್ ಖಾತೆಗಳಿಗೆ ಈಗಾಗಲೇ ಹಣ ವರ್ಗಾಯಿಸಲಾಗಿದೆ. ಕುಡಿಯುವ ನೀರು ಮತ್ತು ಇತರ ಸೌಲಭ್ಯಗಳ ಏರ್ಪಾಟಿಗೆ ರೂ. 545 ಕೋಟಿ ಹಣವನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ಕಳಿಸಲಾಗಿದೆ. ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.