ಮನೆ ರಾಜ್ಯ ಕಾಡಾನೆ ದಾಳಿಗೆ ರೈತ ಬಲಿ: ಗ್ರಾಮಸ್ಥರಲ್ಲಿ ಆತಂಕ

ಕಾಡಾನೆ ದಾಳಿಗೆ ರೈತ ಬಲಿ: ಗ್ರಾಮಸ್ಥರಲ್ಲಿ ಆತಂಕ

0

ಹುಣಸೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ದಾಳಿ ನಡೆಸಿ ರೈತ ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಹನಗೋಡು ಹೋಬಳಿ ಮುದಗನೂರು ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮುದಗನೂರು ಗ್ರಾಮದ ಗ್ರಾಮದ ಚೆಲುವಯ್ಯ(70) ಎಂದು ಗುರುತಿಸಲಾಗಿದೆ.

ಇಂದು ಬೆಳಿಗ್ಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಚೆಲುವಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಕಾಡಾನೆ ಗ್ರಾಮದಲ್ಲೇ ಬೀಡು ಬಿಟ್ಟಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.