ಉಡುಪಿ/ಚಿಕ್ಕಮಗಳೂರು: ಮಲೆನಾಡು ಮತ್ತು ಕರಾವಳಿಯಲ್ಲಿ ಭಾಗದಲ್ಲಿ ನಕ್ಸಲರ ಚುಟುವಟಿಕೆ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ನಕ್ಸಲ್ ನಿಗ್ರಹ ಪಡೆ ಕೂಡ ಚುರುಕುಗೊಂಡಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ನೇತೃತ್ವದ ನಕ್ಸಲರ ತಂಡ ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್, ಬೆಳ್ಕಲ್ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ಮೂಡಿದೆ. ವಿಕ್ರಮ್ ಗೌಡ ಸುಮಾರು 20 ವರ್ಷಗಳ ಹಿಂದೆ ನಕ್ಸಲೈಟ್ ಆಗಿದ್ದನು. ಕೇರಳದಲ್ಲಿ ಈತ ತನ್ನ ಚಟುವಟಿಕೆಗಳನ್ನು ನಡೆಸುತ್ತಿದ್ದನು. ಬಿ.ಜಿ ಕೃಷ್ಣಮೂರ್ತಿ ಬಳಿಕ ಕರ್ನಾಟಕದ ನಕ್ಸಲ್ ನಾಯಕತ್ವವನ್ನು ವಿಕ್ರಂ ಗೌಡ ವಹಿಸಿಕೊಂಡಿದ್ದಾನೆ. ಈತನ ತಂಡದ ಮೂವರು ಮೂವರು ಸಶಸ್ತ್ರಧಾರಿಯಾಗಿ ಬೈಂದೂರಿಗೆ ಆಗಮಿಸಿರುವ ಮಾಹಿತಿ ಲಭ್ಯವಾಗಿದೆ. ಈ ಮೂವರು ಗ್ರಾಮದ ಮನೆಗಳಿಗೂ ತೆರಳಿ ಹೋಗಿರುವುದಾಗಿ ಮಾಹಿತಿ ಸಿಕ್ಕಿದೆ. ನಕ್ಸಲರ ಓಡಾಟ ಮಾಹಿತಿ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದು, ವರ್ಷಗಳ ನಂತರ ಮತ್ತೆ ಬೈಂದೂರಿನಲ್ಲಿ ಕೂಂಬಿಂಗ್ ಸಾಧ್ಯತೆ ಇದೆ.
ನಕ್ಸಲ್ ಹುತಾತ್ಮ ದಿನ ಆಚರಿಸಲು ತಯಾರಿ
2005ರ ಫೆಬ್ರವರಿ 5 ರಂದು ಕಳಸ ತಾಲೂಕಿನ ಮೆಣಸಿನ ಹಾಡ್ಯದಲ್ಲಿ ರಾತ್ರಿ ಪೊಲೀಸರ ಎನ್ಕೌಂಟರ್ನಲ್ಲಿ ಸಾಕೇತ್ ಎಂಬ ನಕ್ಸಲ್ ಸಾವಿಗೀಡಾಗಿದ್ದನು. ಸಾಕೇತ್ ರಾಜನ್ ಸಾವಿಗೆ ರೆಡ್ ಸಲ್ಯೂಟ್ ದಿನ ಆಚರಿಸಲು ನಕ್ಸಲರು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.