ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಇಂದು ದೆಹಲಿಯಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಸಮ್ಮುಖದಲ್ಲಿ 15 ಮಾಜಿ ಶಾಸಕರು ಮತ್ತು ಓರ್ವ ಮಾಜಿ ಸಂಸದ ಇಂದು ಬಿಜೆಪಿ ಸೇರಿದರು.
ಎಲ್ಲಾ ನಾಯಕರು ಬಿಜೆಪಿಗೆ ಸೇರ್ಪಡೆಯಾದರು. ಜಿ ಶಾಸಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಪಕ್ಷದ ಶಾಲು ಹಾಕಿ ನಾಯಕರನ್ನು ಸ್ವಾಗತಿಸಿದರು.
ಇದರೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ 370 ಮತ್ತು ಎನ್ಡಿಎ 400 ಸ್ಥಾನಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಯಕರನ್ನು ಸ್ವಾಗತಿಸಿದ ಅಣ್ಣಾಮಲೈ ಅವರು ಬಿಜೆಪಿಗೆ ಸೇರಿದ ಮಾಜಿ ನಾಯಕರು ಅನುಭವದ ಸಂಪತ್ತನ್ನೇ ಹೊತ್ತು ತಂದಿದ್ದಾರೆ ಜೊತೆಗೆ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಲು ಬಯಸುತ್ತಾರೆ ಎಂದು ಹೇಳಿದರು
ಪಕ್ಷ ಸೇರಿದವರ ವಿವರ:
ಬಿಜೆಪಿ ಸೇರ್ಪಡೆಯಾದವರ ಪಟ್ಟಿ ಬಹಿರಂಗವಾಗಿದೆ.ಎಡಿಎಂಕೆ ಮಾಜಿ ಶಾಸಕ ಕೆ.ವಡಿವೇಲ್, ಚಾಲೆಂಜರ್ ದುರಾಸಾಮಿ, ಪಿ.ಎಸ್.ಕಂದಸಾಮಿ, ಆರ್.ಚಿನ್ನಸಾಮಿ, ಮಾಜಿ ಸಚಿವ ಗೋಮತಿ ಶ್ರೀವಾಸನ್, ವಿ.ಆರ್.ಜಯರಾಮನ್, ಎಸ್.ಎಂ.ವಾಸನ್, ಪಿ.ಎಸ್.ಅರುಳ್, ಎಸ್.ಗುರುನಾಥನ್, ಆರ್.ರಾಜೇಂದ್ರನ್, ಸೆಲ್ವಿ. ಮುರುಗೇಶನ್., ಎ ರೋಕಿಣಿ, ಕೆ ತಮಿಳಗನ್, ಎಸ್ ಇ ವೆಂಕಟಾಚಲಂ, ಮುತ್ತು ಕೃಷ್ಣನ್ ಮತ್ತು ಡಿಎಂಕೆ ಮಾಜಿ ಸಂಸದ ವಿ ಕುಲಂದೈವೇಲು.
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.