ಬೆಂಗಳೂರು: ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ಒಪಿ ಜಾರಿ ಮಾಡಲಾಗಿದೆ.
ಮುಖ್ಯಮಂತ್ರಿಗಳ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲ ಇಲಾಖೆಗಳ ಸ್ಟಾಲ್ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾ ದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನಾಗರಿಕರನ್ನು ಪ್ರಥಮ ಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿಗಳ ವಿಚಾರಣಾ ತೆರೆಯಲಾಗಿದೆ.
ಅಲ್ಲಿ ನಾಗರಿಕರ ಮೊಬೈಲ್ ನಂಬರ್ ಮತ್ತು ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳುಹಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು / ಹಿರಿಯ ನಾಗರಿಕರು / ವಿಕಲಚೇತನರು / ಗರ್ಭಿಣಿಯರು / ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.
ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್ ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.
ಮುಂಜಾನಯಿಂದಲೇ ಸಾವಿರಾರು ಜನರು ಸಿಎಂ ಜನರತಾ ದರ್ಶನಕ್ಕೆ ವಿಧಾನಸೌಧದತ್ತ ಸಾವಿರಾರು ಜನರು ಧಾವಿಸಿದ್ದಾರೆ. ಕೌಂಟರ್ಗಳಲ್ಲಿ ತಮ್ಮ ಅಹವಾಲಿನ ಅರ್ಜಿಗಳನ್ನು ಹಿಡಿದು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ದೂರದೂರುಗಳಿಂದ ಬಂದಿರುವ ಸಾರ್ವಜನಿಕರು ವಿವಿಧ ಅಹವಾಲಿನೊಂದಿಗೆ ಪರಿಹಾರಕ್ಕಾಗಿ ಆಗಮಿಸಿದ್ದಾರೆ.
ಭಾರೀ ಪ್ರಮಾಣದಲ್ಲಿ ಜನರು ವಿಧಾನಸೌಧದತ್ತ ಆಗಮಿಸುತ್ತಿದ್ದು, ಸಿಬ್ಬಂದಿ ನೋಂದಣಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಕೌಂಟರುಗಳಲ್ಲಿ ಜನಸಂದಣಿ ಹೆಚ್ಚಾಗಿದೆ. ಅಂಗವಿಕಲರು, ಹಿರಿಯ ನಾಗರಿಕರು ಜನತಾ ದರ್ಶನಕ್ಕೆ ಆಗಮಿಸಿ, ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಸ್ಯೆ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ.
ವಯೋವೃದ್ಧರು / ಹಿರಿಯ ನಾಗರಿಕರು / ವಿಕಲಚೇತನರು / ಗರ್ಭಿಣಿಯರಿಗಾಗಿ Battery ಚಾಲಿತ buggy/Wheel Chairs ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.
ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇನ್ನು ಜನತಾ ದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.
ಪೊಲೀಸ್ ಬಂದೋಬಸ್ತ್:
ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್ ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಒಟ್ಟು 936 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. 8 ಎಸಿಪಿ, 23 ಇನ್ಸ್ಪೆಕ್ಟರ್, 58 ಸಬ್ ಇನ್ಸ್ಪೆಕ್ಟರ್, 205 ಪೊಲೀಸ್ ಕಾನ್ಸ್ಟೇಬಲ್, 142 ಮಹಿಳಾ ಪೊಲೀಸ್ ಸಿಬ್ಬಂದಿ, 500 ಹೋಂ ಗಾರ್ಡ್ಗಳನ್ನು ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.