ಮನೆ ಅಪರಾಧ ಎಸ್​​ ಎಸ್​​ ಎಲ್ ​ಸಿ ಪೂರ್ವಸಿದ್ಧತಾ ಪರೀಕ್ಷೆ ಕುರಿತು ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್...

ಎಸ್​​ ಎಸ್​​ ಎಲ್ ​ಸಿ ಪೂರ್ವಸಿದ್ಧತಾ ಪರೀಕ್ಷೆ ಕುರಿತು ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ​ಐಆರ್

0

ಶಿವಮೊಗ್ಗ: ಎಸ್​​ ಎಸ್​​ ಎಲ್ ​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ  ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಗೆ ಜಿಲ್ಲಾ ಎನ್​ ಎಸ್ ​ವಿ ದೂರು ನೀಡಿದ್ದು, ಸಿಆರ್​ ಪಿಸಿ ಕಲಂ 157 ಅಡಿ ಎಫ್ ​ಐಆರ್ ದಾಖಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಎಸ್​ ಎಸ್ ​ಎಲ್ ​ಸಿ ಪರೀಕ್ಷೆ ವೇಳಾಪಟ್ಟಿ ಸಂಬಂಧಿಸಿದಂತೆ ಮಕ್ಕಳು ಧಾರ್ಮಿಕವಾಗಿ ಪರಿಣಾಮ ಬೀಳುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎನ್ ​ಎಸ್​ ವಿ ಸದಸ್ಯರು ದೂರು ನೀಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

ಎಸ್​​ ಎಸ್ ​​ಎಲ್​ ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಸಮಯಾವಕಾಶ ನೀಡಲು ಬೆಳಗ್ಗಿನ ಪರೀಕ್ಷೆಗಳನ್ನು ಮಧ್ಯಾಹ್ನದ ನಂತರ ನಿಗದಿ ಮಾಡಲಾಗಿದೆ ಎಂಬ ಬಲಪಂಥೀಯರು ಟೀಕಿಸಿದ್ದರು. ಅಲ್ಲದೆ, ಸಾಮಾಜಿಕ ಜಾಲತಾಣ ಎಕ್ಸ್​​ ನಲ್ಲಿ (ಟ್ವಿಟರ್) ವೇಳಾಪಟ್ಟಿ ಹಂಚಿಕೊಂಡ ಚಕ್ರವರ್ತಿ ಸೂಲಿಬೆಲೆ, ಎಸ್​ ಎಸ್​ ಎಲ್ ​ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗಿನ ಅವಧಿಯಲ್ಲಿ ನಡೆಯಲಿದೆ. ಶುಕ್ರವಾರ ಮಾತ್ರ ಯಾಕೆ ಮಧ್ಯಾಹ್ನದ ನಂತರ ಎಂದು ಪ್ರಶ್ನಿಸಿದ್ದರು. ಅಲ್ಲದೆ, ನಮಾಜ್ ​ಗೆ ಸಮಯವೇ ಎಂದು ಪ್ರಶ್ನಿಸಿದ್ದರು.

ಪರೀಕ್ಷಾ ಮಂಡಳಿ ಸ್ಪಷ್ಟನೆ

ಎಸ್ ​​ಎಸ್ ​​ಎಲ್ ​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಸ್ಪಷ್ಟನೆ ನೀಡಿದ ಪರೀಕ್ಷಾ ಮಂಡಳಿ, ಮಾರ್ಚ್ 1ರಂದು ದ್ವಿತೀಯ ಪಿಯು ಮುಖ್ಯ ಪರೀಕ್ಷೆ ಬೆಳಗ್ಗೆ ನಡೆಯುವ ಕಾರಣ ಎಸ್ ​ಎಸ್ ​ಎಲ್ ​ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ ನಿಗದಿಮಾಡಲಾಗಿದೆ ಸ್ಪಷ್ಟನೆ ನೀಡಿದೆ.