ಮಂಗಳೂರು: ಕಾರ್ಯಕರ್ತರನ್ನು ಒಗ್ಗೂಡಿಸಲು ಹಾಗೂ ಲೋಕಸಭಾ ಚುನಾವಣೆಗೆ ಸಿದ್ಧತೆಯಾಗಿ ಫೆ. 17ರಂದು ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮಧ್ಯಾಹ್ನ 2 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಸಮಾವೇಶ ಆರಂಭಗೊಳ್ಳಲಿದೆ. ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖಂಡರಾದ ರೋಜಿ ಜಾನ್, ಸಲೀಂ ಅಹ್ಮದ್, ರಾಜ್ಯದ ಸಚಿವರು, ಪಕ್ಷದ ಶಾಸಕರು, ರಾಜ್ಯದ ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಬ್ಲಾಕ್, ಗ್ರಾ.ಪಂ. ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿದಂತೆ 25 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕಾರ್ಯಕರ್ತರ ಭಾಗವಹಿಸುವಿಕೆಯೊಂದಿಗೆ ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ಏಳು ಸಮಿತಿಗಳನ್ನು ರಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಯ ಘಟಕಗಳ ಮುಖ್ಯಸ್ಥ ಜತೆ ಸರಣಿ ಸಭೆ ನಡೆಸಲಿದ್ದಾರೆ. ಫೆ. 11ರಂದು ಸಲೀಂ ಅಹ್ಮದ್, ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸುವ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮನಪಾ ಸದಸ್ಯ ನವೀನ್ ಡಿ’ಸೋಜಾ, ಪ್ರಮುಖರಾದ ಮನೋರಾಜ್ ರಾಜೀವ್, ನೀರಜ್ ಪಾಲ್, ಶುಭೋದಯ ಆಳ್ವ, ಟಿ.ಕೆ. ಸುಧೀರ್, ಲಾರೆನ್ಸ್ ಡಿ ಸೋಜಾ, ಪೂರ್ಣೇಶ್ ಭಂಡಾರಿ, ಗಣೇಶ್ ಪೂಜಾರಿ ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.