ಮನೆ ಕಾನೂನು ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಕೆ.ಎಸ್​.ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಕೆ.ಎಸ್​.ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

0

ಬೆಂಗಳೂರು: ಸಂಸದ ಡಿ.ಕೆ.ಸುರೇಶ್​ ಮತ್ತು ವಿನಯ್​ ಕುಲಕರ್ಣಿ ಅವರಿಗೆ ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ಧ ಆರ್‌ ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದರು.

ಕೆಎಸ್​ ಈಶ್ವರಪ್ಪ ಅವರ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ (ಫೆ.09) ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ನೋಟಿಸ್​ ಜಾರಿ

ಇದೀಗ ದಾವಣಗೆರೆ ಪೊಲೀಸರು ಕೆಎಸ್​ ಈಶ್ವರಪ್ಪ ಅವರಿಗೆ ನೋಟಿಸ್​ ಜಾರಿ ಮಾಡಿದ್ದಾರೆ. ಅಲ್ಲದೆ ಶಿವಮೊಗ್ಗದ ಮಲ್ಲೇಶ್ವರ ಬಡಾವಣೆಯಲ್ಲಿರುವ ಕೆಎಸ್​ ಈಶ್ವರಪ್ಪ ಅವರ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ರಾಷ್ಟ್ರ ದ್ರೋಹಿಗಳ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು

ಫೆಬ್ರವರಿ 08 ರಂದು ದಾವಣಗೆರೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ನಡೆದಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಕೆಎಸ್​ ಈಶ್ವರಪ್ಪ “ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದರು. ನಾವು ಹೀಗೆ ಬಿಡಲ್ಲ. ನಾವು ಬಿಜೆಪಿಯವರು ಪಾಕಿಸ್ತಾನವನ್ನ ಭಾರತದಲ್ಲಿ ಸೇರ್ಪಡೆ ಮಾಡಿ ಅಖಂಡ ಭಾರತ ಮಾಡುತ್ತೇವೆ ಎಂದಿದ್ದರು.