ಬೆಂಗಳೂರು: ಕೆಂಗಲ್ ಹನುಮಂತಯ್ಯನವರು ದಕ್ಷ ಆಡಳಿತಗಾರ, ಕರ್ನಾಟಕವನ್ನು ಅತ್ಯಂತ ದಕ್ಷತೆಯಿಂದ ಸುಮಾರು ನಾಲ್ಕೂವರೆ ವರ್ಷ ಆಳಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯ ಅವರ ಜನ್ಮದಿನಾಚಾರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೆಂಗಲ್ ಹನುಮಂತಯ್ಯನವರ ಜನ್ಮ ದಿನದಂದು ಅವರ ಸ್ಮರಣೆ ಮಾಡಿ ಗೌರವ ಸಲ್ಲಿಸಿದ್ದೇವೆ. ರಾಮನಗರ ಜಿಲ್ಲೆಯವರಾದ ಅವರು ಸಂವಿಧಾನ ಜಾರಿಯಾದ ನಂತರ ಮುಖ್ಯಮಂತ್ರಿಯಾದವರು. ಅವರ ಕಾಲದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯ ಮಂತ್ರಿಯಾದವರು. ವಿಧಾನಸೌಧದ ಕಟ್ಟಿಸಿದ್ದು ಅವರು. ಆದರೆ ದುರ್ದೈವ, ಅದನ್ನು ಅವರು ಉದ್ಘಾಟಿಸಲು ಬಿಡಲಿಲ್ಲ ಎಂದರು.
ಮಾದರಿ ಆಡಳಿತ
ಅವರ ಆಡಳಿತ ನಮಗೆಲ್ಲಾ ಮಾದರಿ. ವಿಧಾನಸೌಧದ ಪೂರ್ವದಿಕ್ಕಿನಲ್ಲಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ಬರೆಸಿದ್ದು, ಜನಸೇವೆಯೇ ಜನಾರ್ಧನ ಸೇವೆ ಎಂದು ಅದರ ಅರ್ಥ. ಬದ್ಧತೆ, ನಿಷ್ಠುರತೆಯಿಂದ ಸರ್ಕಾರದ ಕೆಲಸ ಮಾಡಿದ್ದರು. ಹಳೇ ಮೈಸೂರು ಭಾಗದವರಾದರೂ ವಿಶಾಲ ಕರ್ನಾಟಕವಾಗಬೇಕೆಂದು ಕರ್ನಾಟಕ ಏಕೀಕರಣದಲ್ಲಿ ಭಾಗವಹಿಸಿದ್ದರು. ಅವರ ತತ್ವ ಆದರ್ಶಗಳು ನಮಗೆ ಮಾದರಿ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.