ಮನೆ ರಾಜಕೀಯ ಮುತಾಲಿಕ್ ಅಂತವರನ್ನು ಒದ್ದು ಒಳಗೆ ಹಾಕಿ: ಹೆಚ್ ಡಿ ಕುಮಾರಸ್ವಾಮಿ

ಮುತಾಲಿಕ್ ಅಂತವರನ್ನು ಒದ್ದು ಒಳಗೆ ಹಾಕಿ: ಹೆಚ್ ಡಿ ಕುಮಾರಸ್ವಾಮಿ

0

ಬಾಗಲಕೋಟೆ(Bagalkote): ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನಂತವರನ್ನ ಮೊದಲು ಒದ್ದು ಒಳಗಡೆ ಹಾಕಿ. ಇಲ್ಲ ಅಂಧರೆ ಶಾಂತಿ ನೆಲೆಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್,ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಇಂದು ಮಾತನಾಡಿದ  ಅವರು, ಇದು ರಾಮಸೇನೆಯೋ ಅಥವಾ ರಾವಣನ ಸೇನೆಯೋ. ಇಂತಹ ವಿಷಯಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಬಾರದು. ಇಂತಹ ವ್ಯಕ್ತಿಗಳಿಂದ ಶಾಂತಿಯ ತೋಟ ನೆಲೆಸುವುದಿಲ್ಲ. ಸರ್ಕಾರ ಬೆಂಕಿ ಹಚ್ಚುವವರನ್ನ ಬೆಳೆಯಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಇಂತಹ ವಿಷ ಬೀಜಗಳನ್ನು ಕಿತ್ತು ಹಾಕಬೇಕು. ಸರ್ಕಾರ ಮೌನವಾಗಿ ಒಪ್ಪಿಗೆ ಸೂಚಿಸುವುದನ್ನು ಬಿಡಬೇಕು. ಮೊದಲು ಮುತಾಲಿಕ್ ರಂತರನ್ನು ಒದ್ದು ಒಳಗೆ ಹಾಕಬೇಕು. ಇಲ್ಲದಿದ್ದರೆ ಸಮಾಜದಲ್ಲಿ ಶಾಂತಿ ಉಳಿಸುವುದು ಕಷ್ಟವಾಗುತ್ತದೆ ಎಂದು ಹೆಚ್.ಡಿಕೆ ತಿಳಿಸಿದರು.