ನವದೆಹಲಿ: ಹಿಂದಿನ ಸರ್ಕಾರಗಳು 10 ವರ್ಷಗಳಲ್ಲಿ ನೀಡಿದ್ದ ಉದ್ಯೋಗಕ್ಕಿಂತ ಅಷ್ಟೇ ಅವಧಿಯ ನಮ್ಮ ಆಡಳಿತದಲ್ಲಿ 1.5 ಪಟ್ಟು ಹೆಚ್ಚು ಉದ್ಯೋಗಗಳನ್ನು ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರೋಜಗಾರ್ ಮೇಳದ(ಉದ್ಯೋಗ ಮೇಳ) ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಒಂದು ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮ ಸರ್ಕಾರ ಉದ್ಯೋಗ ನೇಮಕಾತಿಯಲ್ಲಿ ಪಾರದರ್ಶಕತೆ ತಂದಿದೆ. ಕಾಲಮಿತೊಯಲ್ಲಿ ಉದ್ಯೋಗಕ್ಕೆ ನೇಮಕಾತಿ ಖಚಿತಪಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದರು.
ತಮ್ಮೆಲ್ಲರಿಗೂ ಸಮಾನ ಅವಕಾಶ ಸಿಗುತ್ತಿದೆ ಎಂದು ಯುವಕರು ಈಗ ಅರಿತುಕೊಂಡಿದ್ದಾರೆ. ತಮ್ಮ ಪ್ರತಿಭೆ ಮತ್ತು ಪರಿಶ್ರಮದ ಮೂಲಕ ಸರ್ಕಾರಿ ಉದ್ಯೋಗ ಪಡೆದುಕೊಳ್ಳಬಹುದು ಎಂಬ ನಂಬಿಕೆ ಬಂದಿದೆ ಎಂದು ಅವರು ಹೇಳಿದ್ದಾರೆ.
ಒಂದು ಕೋಟಿ ಮನೆಗಳ ಛಾವಣಿಗಳಲ್ಲಿ ಸೋಲಾರ್ ಪ್ಯಾನಲ್ ಅಳವಡಿಕೆ, ಮೂಲಸೌಕರ್ಯ ವಲಯಕ್ಕೆ ಮಾಡಿರುವ ಅಪಾರ ಹೂಡಿಕೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಿವೆ ಎಂದು ಮೋದಿ ಹೇಳಿದ್ದಾರೆ.
1.25 ಸ್ಟಾರ್ಟಪ್ ಗಳ ಮೂಲಕ ಭಾರತವು ಸ್ಟಾರ್ಟಪ್ ಕ್ಷೇತ್ರದಲ್ಲಿ ವಿಶ್ವದಲ್ಲಿ ಮೂರನೇ ದೊಡ್ಡ ದೇಶವಾಗಿದೆ. ಯುವಕರು ಚಿಕ್ಕ ನಗರಗಳಲ್ಲಿ ತಮ್ಮದೇ ಸಂಸ್ಥೆ ಸ್ಥಾಪಿಸುತ್ತಿದ್ದಾರೆ. ಅವುಗಳು ಲಕ್ಷಾಂತರ ಉದ್ಯೋಗ ಸೃಷ್ಟಿಸುತ್ತಿವೆ ಎಂದು ಅವರು ಹೇಳಿದ್ದಾರೆ.
ಸ್ಟಾರ್ಟಪ್ ಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಸಂಶೋಧನೆ ಹಾಗೂ ನಾವೀನ್ಯತೆ ವಲಯಕ್ಕೆ ₹1 ಲಕ್ಷ ಕೋಟಿ ನೀಡಲಾಗಿದೆ ಎಂದು ಪ್ರಧಾನಿ ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.