ವಿಜಯಪುರ: ಭಾರತ ಸಂಚಾರ ನಿಗಮ ಲಿಮಿಟೆಡ್ ಜನರಲ್ ಮ್ಯಾನೇಜರ್ ಬಳಕೆ ಮಾಡುತ್ತಿದ್ದ ಕಾರು ಜಪ್ತಿ ಮಾಡಲಾಗಿದೆ.
ನಿಗಮದಿಂದ ನೀಡಿದ ಕಾರಿನ ಬದಲು ಬೇರೆ ಕಾರು ಬಳಕೆ ಮಾಡುತ್ತಿದ್ದ ಬಗ್ಗೆ ಸಿಬ್ಬಂದಿ ನೀಡಿದ ದೂರಿನ ಅನ್ವಯ ಪೊಲೀಸರು ವಿಕಾಸ್ ಜೈಕರ್ ಬಳಸುತ್ತಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ.
ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನರಲ್ ಮ್ಯಾನೇಜರ್ ಆಗಿ ವಿಕಾಸ್ ಜೈಕರ್ ಕೆಲಸ ಮಾಡುತ್ತಿದ್ದಾರೆ. ಬಿಎಸ್ ಎನ್ ಎಲ್ ನಿಂದ ಕಾರು ನೀಡಿದ್ದರೂ ವಿಕಾಸ್ ಜೈಕರ್ ಅವರು ಬೆಳಗಾವಿಯಿಂದ ಖಾಸಗಿ (ವೈಟ್ ಬೋರ್ಡ್) ಕಾರು ಮೂಲಕ ವಿಜಯಪುರದ ಕಚೇರಿಗೆ ಹೋಗಿದ್ದರು.
ಬಿಎಸ್ ಎನ್ ಎಲ್ನಿಂದ KA 22 C 8059 ಎಲೋ ಬೋರ್ಡ್ ಕಾರ್ ನೀಡಲಾಗಿತ್ತು. ಈ ಕಾರಿನ ಬದಲಾಗಿ ವಿಕಾಸ್ ಜೈಕರ್ ಅವರು KA 22 MB 0494 ನಂಬರಿನ ಕಾರ್ ಬಳಕೆ ಮಾಡುತ್ತಿದ್ದರು. ಈ ವಿಕಾಸ್ ಜೈಕರ್ ಅವರನ್ನು ಬಿಎಸ್ಎನ್ಎಲ್ ಸಿನೀಯರ್ ಆಫೀಸ್ ಅಸೋಸಿಯೇಟ್ ಸುರೇಶ ಬಿರಾದಾರ್ ಅವರು ಪ್ರಶ್ನೆ ಮಾಡಿದ್ದರು.
ಬೆಳಗಾವಿಂದ ವಿಜಯಪುರಕ್ಕೆ ಪ್ರತಿಬಾರಿ ಪತ್ನಿಯನ್ನು ಕರೆದುಕೊಂಡು ಹೋಗುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ. ಅಲ್ಲದೆ, ಜನರಲ್ ಮ್ಯಾನೇಜರ್ ಬೇರೆ ಕಾರು ಬಳಕೆ ಮಾಡುತ್ತಿರುವ ಕುರಿತು ಬಿಎಸ್ ಎನ್ ಎಲ್ ನೌಕರರೊಬ್ಬರು 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಅದರಂತೆ ಸ್ಥಳಕ್ಕೆ ಆಗಮಿಸಿದ 112 ಪೊಲೀಸರು ಪರಿಶೀಲನೆ ನಡೆಸಿ ವಿಕಾಸ್ ಜೈಕರ್ ಬಳಕೆ ಮಾಡುತ್ತಿದ್ದ ಬೇರೆ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಗಾಂಧಿಚೌಕ್ ಠಾಣೆಯ ಪೊಲೀಸರು ವಿಚಾರಣೆ ಕೂಡ ನಡೆಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.