ಮನೆ ಅಪರಾಧ ಗದಗ: ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ

ಗದಗ: ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ

0

ಗದಗ: ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವಂತಹ ಘಟನೆ ಗದಗನ ಬೆಟಗೇರಿಯ ಹುಯಿಲಗೋಳ ರಸ್ತೆಯಲ್ಲಿ ಫೆಬ್ರವರಿ 8 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆಗೊಳಗಾದ ಯುವಕ ತೇಜಸ್(20) ಮೇಹರವಾಡಿ ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಸಹೋದರಿಗೆ ಯಾಕೆ ಚುಡಾಯಿಸುತ್ತೀರಿ ಅಂತ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಆರೋಪ ಮಾಡಲಾಗಿದೆ. ಎಂಟು ಯುವಕರ ಗುಂಪಿನಿಂದ ಅಟ್ಯಾಕ್​ ಮಾಡಿದ್ದು, ಸದ್ಯ ಮೂವರು ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಲಾಗಿದೆ.

ಪುಡಿರೌಡಿಗಳ ಅಟ್ಟಹಾಸಕ್ಕೆ ಗದಗ-ಬೆಟಗೇರಿ ಅವಳಿ ನಗರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.